Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮೇ 7 ರವರೆಗೂ ಏಕನಾಥೇಶ್ವರಿ ಅಮ್ಮನವರ ಜಾತ್ರೆ

---Advertisement---

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಮುಂದೂಡಲಾಗಿದ್ದ ಏಕನಾಥೇಶ್ವರಿ ಅಮ್ಮನವರ ಜಾತ್ರೆ ಏ.23 ರಿಂದ ಆರಂಭಗೊಂಡಿದ್ದು, ಮೇ.7 ರಂದು ಕಂಕಣ ವಿಸರ್ಜನೆ ಮತ್ತು ಗಂಗಾಪೂಜೆಯೊಂದಿಗೆ ಮುಕ್ತಾಯಗೊಳ್ಳಲಿದೆ.

27 ರಂದು ಕಂಕಣ ಧಾರಣೆ, ಭಂಡಾರ ಪೂಜೆ, ರುದ್ರಾಭಿಷೇಕ, ರಾತ್ರಿ ಎಂಟು ಗಂಟೆಯಿಂದ ರಾಜ ಬೀದಿಗಳಲ್ಲಿ ಸಿಂಹವಾಹಿನಿ ಉತ್ಸವ.

28 ರಂದು ರಾತ್ರಿ ಎಂಟು ಗಂಟೆಯಿಂದ ಸರ್ಪೋತ್ಸವದೊಂದಿಗೆ ಭಕ್ತರ ಮನೆಗಳಲ್ಲಿ ಪೂಜೆ.

29 ರಂದು ರಾತ್ರಿ 8 ಗಂಟೆಯಿಂದ ರಾಜ ಬೀದಿಗಳಲ್ಲಿ ಮಯೂರೋತ್ಸವ,

30 ರಂದು ರಾತ್ರಿ ಏಕನಾಥೇಶ್ವರಿ ಅಮ್ಮನಿಗೆ ಭಂಡಾರ ಪೂಜೆ.

ಮೇ.1 ರಂದು ಬೆಳಿಗ್ಗೆ 9 ಗಂಟೆಗೆ ಭಂಡಾರದ ಪೂಜೆ, ಏಕನಾಥೇಶ್ವರಿ ಅಮ್ಮನನ್ನು ಬೆಟ್ಟದಿಂದ ಕೆಳಗಿಳಿಸಲಾಗುವುದು.

ಅರ್ಚಕರ ಮನೆಯಲ್ಲಿ ಮಕ್ಕಳಿಗೆ ಬೇವಿನ ಉಡುಗೆ ಸೇವಾ ಅಶ್ವೋತ್ಸವದಲ್ಲಿ ಕಾಮನಬಾವಿ ಹೊಂಡದಲ್ಲಿ ಗಂಗಾಪೂಜೆ. ನಂತರ ಜಿಲ್ಲಾಧಿಕಾರಿ ಬಂಗಲೆ ಹಾಗೂ ಕೆಳಗೋಟೆ ಭಕ್ತಾಧಿಗಳಿಂದ ಪೂಜೆ.

2 ರಂದು ಸಂಜೆ ಏಳಕ್ಕೆ ಕರುವಿನಕಟ್ಟೆ ಮತ್ತು ಪಾದಗಟ್ಟೆ, ವಿದ್ಯಾನಗರ, ಮೆದೇಹಳ್ಳಿ ಭಕ್ತಾಧಿಗಳಿಂದ ಪೂಜೆ.

3 ರಂದು ಬೆಳಿಗ್ಗೆ ಎಂಟು ಗಂಟೆಯಿಂದ ರಾಜ ಬೀದಿಗಳಲ್ಲಿ ಅಶ್ವೋತ್ಸವ ಮತ್ತು ಹೂವಿನ ಉತ್ಸವ, ಕರುವಿನಕಟ್ಟೆ ಮತ್ತು ಜೋಗಿಮಟ್ಟಿ ರಸ್ತೆಯ ಭಕ್ತಾಧಿಗಳಿಂದ ಮಹಾ ಮಂಗಳಾರತಿ.

4 ರಂದು ಸಂಜೆ 5-30 ಕ್ಕೆ ಜಾತ್ರಾ ಬಯಲಿನ ಪಾದಗಟ್ಟೆಯಲ್ಲಿ ಏಕನಾಥೇಶ್ವರಿ ಅಮ್ಮನವರ ಸಿಡಿ ಉತ್ಸವ. ಮಹಾಮಂಗಳಾರತಿ.
5 ರಂದು ಸಂಜೆ 6-30 ಕ್ಕೆ ಬೆಟ್ಟದ ಮೇಲೆ ಓಕಳಿ ಉತ್ಸವ.

ಸಮಸ್ತ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಏಕನಾಥೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗುವಂತೆ ಏಕನಾಥೇಶ್ವರಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಜಮೀನ್ದಾರ್ ದೊರೆಸ್ವಾಮಿ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...