Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ವಿಜೃಂಭಣೆಯಿಂದ ನಡೆಯಿತು.

ಪಾದಗುಡಿಯ ತುಂಬೆಲ್ಲಾ ಭಕ್ತರು ಜಮಾಯಿಸಿ ಉದೋ ಉದೋ ಎನ್ನುತ್ತಿದ್ದರು. ಸಿಡಿ ಕಂಬವನ್ನು ಬಣ್ಣ ಬಣ್ಣದ ವಸ್ತ್ರಗಳಿಂದ ಅಲಂಕರಿಸಲಾಗಿತ್ತು. ಸಿಡಿ ಕಟ್ಟುವ ಕಂಬದ ಒಂದು ತುದಿಯಲ್ಲಿ ಕೆಂಪು ಬಣ್ಣದ ಬಟ್ಟೆಯಿಂದ ಕಮಾನು ನಿರ್ಮಿಸಿ ಬಲೂನು ಹಾಗೂ ಬೇವಿನ ಸೊಪ್ಪಿನಿಂದ ಸಿಂಗರಿಸಲಾಗಿತ್ತು. ಸಿಡಿ ಆಡುವವರು ಬಿಳಿ ಪಂಚೆ, ತಲೆಗೆ ಪೇಟ, ಮೈಗೆ ಗಂಧ ಅರಿಶಿಣವನ್ನು ಪೂಸಿಕೊಂಡು ಕೈಯಲ್ಲಿ ಕತ್ತಿ ಹಿಡಿದಿದ್ದರು. ಹರಕೆ ಹೊತ್ತವರು ಸಿಡಿ ಕಂಬದಲ್ಲಿ ಮೂರು ಸುತ್ತು ತಿರುಗುತ್ತಿದ್ದಾಗ ನೆರೆದಿದ್ದ ಸಹಸ್ರಾರು ಭಕ್ತರು ಭಕ್ತಿ ಸಮರ್ಪಿಸುತ್ತಿದ್ದರು.

ನಗರ ಸೇರಿದಂತೆ ಗ್ರಾಮೀಣ ಭಾಗಗಳಿಂದಲೂ ಅಪಾರ ಭಕ್ತರು ಜಮಾಯಿಸಿ ಸಿಡಿ ವೀಕ್ಷಿಸಿದರು. ದೇವಸ್ಥಾನ ಹಾಗೂ ಆವರಣ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿತ್ತು.

ಕೆಲವು ಮಹಿಳೆಯರು ಪುಟ್ಟ ಮಕ್ಕಳನ್ನು ಹೊತ್ತು ಸಿಡಿ ನೋಡಿ ಸಂಭ್ರಮಿಸಿದರು. ಆನೆ ಬಾಗಿಲು, ಕೋಟೆ ರಸ್ತೆ, ಫಿಲ್ಟರ್‍ಹೌಸ್, ಕರುವಿನಕಟ್ಟೆ ರಸ್ತೆ, ಕಾಮನಬಾವಿ ಬಡಾವಣೆ ರಸ್ತೆ ಭಕ್ತರಿಂದ ತುಂಬಿ ತುಳುಕಾಡುತ್ತಿತ್ತು. ಮಹಿಳೆಯರು ಆರತಿ ತಟ್ಟೆಗಳನ್ನು ಹಿಡಿದು ಸಿಡಿ ಆಡುವವರನ್ನು ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕರೆ ತರುತ್ತಿದ್ದರು. ಕೆಲವರು ತಮ್ಮ ಚಿಕ್ಕ ಚಿಕ್ಕ ಮಕ್ಕಳನ್ನು ಸಿಡಿ ಕಂಬದ ಮೇಲೆ ಕೂರಿಸಿ ಖುಷಿ ಪಡುತ್ತಿದ್ದರು.

ಏಕನಾಥೇಶ್ವರಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಜಮೀನ್ದಾರ್ ದೊರೆಸ್ವಾಮಿ, ನಿರ್ದೇಶಕ ರಾಮಜ್ಜ, ಎಸ್.ಬಿ.ಎಲ್.ಮಲ್ಲಿಕಾರ್ಜುನ್, ನಗರಸಭೆ ಮಾಜಿ ಸದಸ್ಯ ರಾಜೇಶ್, ಓಂಕಾರ್ ಸೇರಿದಂತೆ ಉತ್ಸವ ಸಮಿತಿಯ ಪದಾಧಿಕಾರಿಗಳು ಸಿಡಿಯಲ್ಲಿ ಪಾಲ್ಗೊಂಡು ಏಕನಾಥೇಶ್ವರಿಗೆ ಭಕ್ತಿ ಅರ್ಪಿಸಿದರು.
ಜನಜಂಗುಳಿಯಿದ್ದುದರಿಂದ ಕೆಲವರು ಮನೆ ಹಾಗೂ ಕಾಂಪೌಂಡ್‍ಗಳ ಮೇಲೆ ಏರಿ ಸಿಡಿ ವೀಕ್ಷಿಸುತ್ತಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಸಾವಿನ ಬಳಿಕ ಚಂದ್ರಕಾಂತ್ ಆತ್ಮಹತ್ಯೆ: ಹೆಂಡತಿ ಬಿಟ್ಟು ರಿಲೇಷನ್ ಶಿಪ್ ನಲ್ಲಿದ್ದರಾ ಚಂದ್ರು..?

ತೆಲುಗಿನಲ್ಲಿ ಖ್ಯಾತಿ ಪಡೆದಿದ್ದ ನಟಿ ಪವಿತ್ರಾ ಜಯರಾಂ ಆಕ್ಸಿಡೆಂಟ್ ನಲ್ಲಿ ತೀರಿಕೊಂಡ ಬಳಿಕ, ಅವರ ಗೆಳೆಯ ಚಂದ್ರಕಾಂತ್ ಕೂಡ ಸೂಸೈಡ್ ಮಾಡಿಕೊಂಡಿದ್ದಾರೆ. ಚಂದ್ರಕಾಂತ್ ಸಾವಿನ ಬಗ್ಗೆ ಅವರ ಪತ್ನಿ ಮಾತನಾಡಿದ್ದು, ಪವಿತ್ರಾ ಮೇಲೆ ಆರೋಪ

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

error: Content is protected !!