Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಲಕ್ಷಾಂತರ ಮೌಲ್ಯದ ಮೆಕ್ಕೆಜೋಳದ ರಾಶಿಗೆ ಬೆಂಕಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 15 : ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದ ಬಳಿ ಮೆಕ್ಕೆಜೋಳದ ರಾಶಿಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ಮೌಲ್ಯದ ಮೆಕ್ಕೆಜೋಳ ಬೆಂಕಿಗಾಹುತಿ ಆದ ಘಟನೆ ಶನಿವಾರ ನಡೆದಿದೆ.

ಲಕ್ಷ್ಮೀಸಾಗರ ಗ್ರಾಮದ ರೈತ ಧನಂಜಯ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ಘಟನೆ ನಡೆದಿದೆ.
20 ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಒಂದೆಡೆ ರಾಶಿ ಮಾಡಿದ್ದರು. ಯಾರೋ ದುಷ್ಕರ್ಮಿಗಳು ದ್ವೇಷದಿಂದ ಮೆಕ್ಕೆಜೋಳದ ರಾಶಿಗೆ ಬೆಂಕಿಯಿಟ್ಟಿದ್ದಾರೆಂದು ಶಂಕಿಸಲಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಬೆಂಕಿಗೆ ಆಹುತಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now