ಚಿತ್ರದುರ್ಗ, ಅ.16: ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮ ಗಾಂಜಾ ಸಾಗಣಿಕೆ ಮಾಡುತ್ತಿದ್ದ 2 ಪ್ರತ್ಯೇಕ ಪ್ರಕರಣಗಳನ್ನು ಭೇಧಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿ 2 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.
ಅಕ್ಟೋಬರ್ 10 ರಂದು ಹಿರಿಯೂರು ತಾಲೂಕು ಗಾರೇದಿಂಡು ರಸ್ತೆಯಲ್ಲಿ ಮಧ್ಯಾಹ್ನ 2:30 ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ ಕಂದಿಕೆರೆ ಗ್ರಾಮದ ಯಶವಂತ, ಹಿರಿಯೂರು ಪಟ್ಟಣದ ಭರತ್.ಹೆಚ್.ಎನ್. ಅವರನ್ನು ಬಂಧಿಸಿ 300 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕಿ ವನಿತಾ.ಎ, ಉಪ ನಿರೀಕ್ಷಕ ನಾಗರಾಜ, ಅಬಕಾರಿ ಕಾನ್ಸ್ಟೇಬಲ್ ರಾಮಾಂಜನೇಯ, ವಾಹನ ಚಾಲಕ ನಾಗರಾಜ.ಕೆ.ತೋಳಮಟ್ಟಿ ಪಾಲ್ಗೊಂಡಿದ್ದರು.

ಸಂಜೆ 7:30ಕ್ಕೆ ಮೊಳಕಾಲ್ಮೂರು ತಾಲೂಕಿನ ವೆಂಕಟಾಪುರ ಗ್ರಾಮದ ಹಡಗಿಲಿ ಬಳಿ ದ್ವಿಚಕ್ರ ವಾಹನದಲ್ಲಿ ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ, ಆಂದ್ರ ಪ್ರದೇಶದ ರಾಯದುರ್ಗ ತಾಲ್ಲೂಕಿನ ಮಲ್ಲಪ್ಪ, ಗೊಲ್ಲ ಕೆಂಜಂಡಪ್ಪ ಅವರನ್ನು ಬಂಧಿಸಿ 1726 ಗ್ರಾಂ ಗಾಂಜಾ ವಶಪಡಿಸಿಕೊಳ್ಳಾಗಿದೆ. ಕಾರ್ಯಾಚರಣೆಯಲ್ಲಿ ಜಿಲ್ಲಾ ವಿಚಕ್ಷಣಾ ದಳದ ಅಬಕಾರಿ ಉಪನಿರೀಕ್ಷಕ ಸಿದ್ದೇಶ್ ನಾಯ್ಕ್.ಕೆ, ಅಬಕಾರಿ ಕಾನ್ಸ್ಟೇಬಲ್ ಬಸವರಾಜ.ಜೆ, ವಾಹನ ಚಾಲಕ ಎಸ್.ತಿಪ್ಪೆಸ್ವಾಮಿ ಪಾಲ್ಗೊಂಡಿದ್ದರು.
ಸದರಿ ಪ್ರಕರಣಗಳಲ್ಲಿ ಆರೋಪಿಗಳ ವೈದ್ಯಕೀಯ ತಪಾಸಣೆ ಮಾಡಿ, ಎನ್.ಡಿ.ಪಿ.ಎಸ್(ನಾರ್ಕೋಟಿಕ್ ಡ್ರಗ್ಸ್ ಅಂಡ್ ಸೈಕೋಟ್ರೋಪಿಕ್ ಸಬ್ಸ್ಟೆನ್ಸ್) ಕಾಯ್ದೆ ಅನುಸಾರ ಪ್ರಕರಣ ದಾಖಲಿಸಲಾಗಿದೆ. ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









