ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 04 : ನಗರದ ಅಮೃತ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇದೇ ಏಪ್ರಿಲ್ 07 ರಂದು ಉಚಿತ ಮೂಳೆ ಸಾಂದ್ರತೆ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ.
ಯಾರೆಲ್ಲ ಪರೀಕ್ಷಿಸಿಕೊಳ್ಳಬಹುದು ?
* ನಿಷ್ಕ್ರಿಯ ಜೀವನ ಶೈಲಿಯುಳ್ಳವರು
* 35 ವರ್ಷ ಮೇಲ್ಪಟ್ಟ ಸ್ತ್ರೀಯರು
* 40 ವರ್ಷ ಮೇಲ್ಪಟ್ಟ ಗಂಡಸರು
* ಮಂಡಿ ನೋವು, ಸೊಂಟ ನೋವಿನಿಂದ ಬಳಲುತ್ತಿರುವವರು
* ತುಂಬಾ ಸಮಯದಿಂದ ಔಷಧಿಗಳನ್ನು ತೆಗೆದುಕೊಳ್ಳುತ್ತಿರುವವರು ನಿಮ್ಮ ಮೂಳೆ ಸಾಂದ್ರತೆಯನ್ನು ಪರೀಕ್ಷಿಸಿಕೊಳ್ಳಿ ಮತ್ತು ಅಸ್ಥಿರಂಧ್ರತೆಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಬಹುದಾಗಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ದಿನಾಂಕ : 07.04.26
ಸಮಯ: ಬೆಳಗ್ಗೆ 10:00 ರಿಂದ ಸಂಜೆ 4:00 ರ ವರೆಗೆ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ದೂರವಾಣಿ: 08194 234 844
ಸ್ಥಳ: ಅಮೃತ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಒನಕೆ ಓಬವ್ವ ಸ್ಟೇಡಿಯಂ ಹಿಂಬಾಗ, ಚಿತ್ರದುರ್ಗ – 577501

















