Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ರೋಟರಿ ಕ್ಲಬ್ ಚಿನ್ಮೂಲಾದ್ರಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜು. 10 : ರೋಟರಿ ಕ್ಲಬ್ ಆಫ್ ಚಿನ್ಮೂಲಾದ್ರಿ ಚಿತ್ರದುರ್ಗ, ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಚಿತ್ರದುರ್ಗ, ಪತಂಜಲಿ ಯೋಗ ಸಂಸ್ಥೆ ಚಿತ್ರದುರ್ಗ, ಪತಂಜಲಿ ಮಹಿಳಾ ಯೋಗ ಸಂಸ್ಥೆ ಚಿತ್ರದುರ್ಗ, ಸಂಗಮ ಯೋಗ ಬಳಗ ಚಿತ್ರದುರ್ಗ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಹಾಗೂ ನುರಿತ ತಜ್ಞ ವೈದ್ಯರೊಂದಿಗೆ ಉಚಿತ ಸಮಾಲೋಚನಾ ಶಿಬಿರವೂ ಜು. 10ರ ಶುಕ್ರವಾರ ಬೆಳಗ್ಗೆ 7ರಿಂದ 9ರ ವರೆಗೆ ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು.

ಶಿಬಿರದಲ್ಲಿ ಉಚಿತವಾಗಿ ಬ್ಲಡ್ ಪ್ರೆಷರ್, ಬ್ಲಡ್ ಶುಗರ್, ತೂಕ ತಪಾಸಣೆ ಹಾಗೂ ತಜ್ಞ ವೈದ್ಯರೊಂದಿಗೆ ಉಚಿತ ಸಮಾಲೋಚನೆ ಲಭ್ಯವಿತ್ತು. ದಿನನಿತ್ಯ ಕ್ರೀಡಾಂಗಣದಲ್ಲಿ ಯೋಗಾಭ್ಯಾಸ ಮಾಡುವ ಸುಮಾರು 135ಕ್ಕೂ ಹೆಚ್ಚು ಜನ ಇದರ ಸದುಪಯೋಗವನ್ನು ಪಡೆದುಕೊಂಡರು.

ರೋಟರಿ ಕ್ಲಬ್ ಆಫ್ ಚಿನ್ಮೂಲಾದ್ರಿ ಚಿತ್ರದುರ್ಗ ಅಧ್ಯಕ್ಷರು ರೋ. ಶಶಿಧರ್ ರಾವ್, ಕಾರ್ಯದರ್ಶಿಗಳು ರೋ. ಮಂಜುನಾಥ್ ಭಾಗವತ್, ಖಜಾಂಚಿ ರೋ. ಪಿ.ಬಿ. ಶಿವರಾಮ್, ಮಾಜಿ ಅಧ್ಯಕ್ಷರುಗಳಾದ ರೋ. ಶಂಕರಪ್ಪ, ರೋ. ನಾಗರಾಜ್ ಸಂಗಂ ಹಾಗೂ ಸಹಯೋಗ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಸದಸ್ಯರುಗಳಾದ ಪಾಸ್ಟ್ ಡಿಸ್ಟ್ರಿಕ್ಟ್ ಗವರ್ನರ್ ರೋ. ಮಧುಪ್ರಸಾದ್, ರೋ. ಮಾಧುರಿ ಮಧುಪ್ರಸಾದ್, ರೋ. ಗಿರೀಶ್, ರೋ. ಅರುಣ್ ಕುಮಾರ್ ಹಾಗೂ ಇನ್ನಿತರ ರೋಟರಿ ಸದಸ್ಯರು, ಪ್ರಾಧ್ಯಾಪಕರಾದ ಗುರುಸ್ವಾಮಿ, ಸುನಿಲ್ ಕುಮಾರ್, ವೇಮಣ್ಣ, ಬಸವೇಶ್ವರ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ವತಿಯಿಂದ ತಜ್ಞ ವೈದ್ಯರ ತಂಡ, ಯೋಗಾಭ್ಯಾಸಿಗಳು ಮತ್ತಿತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now