ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.24 : ಆಕಾಶವಾಣಿ ಸಮೀಪವಿರುವ ಚನ್ನಕೇಶವಸ್ವಾಮಿಯ ರಥೋತ್ಸವ ಶನಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಶ್ರೀದೇವಿ ಭೂದೇವಿಯನ್ನು ರಥದಲ್ಲಿ ಕೂರಿಸಿ ವಿಶೇಷವಾಗಿ ಅಲಂಕರಿಸಿದ ನಂತರ ನೆರೆದಿದ್ದ ಭಕ್ತರು ರಥವನ್ನು ಎಳೆದಾಗ ಮಂಡಕ್ಕಿ ತೂರಿ ಭಕ್ತಿ ಸಮರ್ಪಿಸಲಾಯಿತು.
ತಿಪಟೂರಿನ ವಿನಾಯಕ ನಾದಸ್ವರದ ಮಂಜುಳ ಬಸವರಾಜ್ ಮತ್ತು ತಂಡದವರ ನಾದಸ್ವರ ಹಾಗೂ ತಬಲ ರಥೋತ್ಸವಕ್ಕೆ ಮೆರಗು ನೀಡಿತು.
ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರ ಸಹೋದರ ಕೆ.ಡಿ.ಪಿ.ಸದಸ್ಯ ಕೆ.ಸಿ.ನಾಗರಾಜ್, ಹಿರಿಯ ನ್ಯಾಯವಾದಿ ಫಾತ್ಯರಾಜನ್,
ಮಾರುತೇಶ್ರೆಡ್ಡಿ, ನಗರಸಭೆ ಮಾಜಿ ಸದಸ್ಯ ಡಿ.ಪ್ರಕಾಶ್ ಇನ್ನು ಅನೇಕರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















