Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿ.ಪಂ. ಎದುರು ಹಮಾಲಿ ಕಾರ್ಮಿಕರು ಮತ್ತು ಗ್ರಾ. ಪಂ. ನೌಕರರ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 18 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್, ಗ್ರಾಮ ಪಂಚಾಯಿತಿ ನೌಕರರು ಜಿಲ್ಲಾ ಪಂಚಾಯಿತಿ ಎದುರು ಸಿ.ಐ.ಟಿ.ಯು. ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿರುವ ಕರ ವಸೂಲಿಗಾರ, ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ಸ್ ನೀರುಗಂಟಿಗಳು, ಜವಾನ, ಸ್ವಚ್ಚಗಾರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ದಿನನಿತ್ಯ ಬಳಕೆಯ ಪದಾರ್ಥಗಳ ಬೆಲೆ ಏರಿಕೆಯಾಗಿರುವುದರಿಂದ ಮಾಸಿಕ 31 ಸಾವಿರ ರೂ.ಗಳ ವೇತನ ನಿಗಧಿಪಡಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರು ನಿವೃತ್ತಿ/ ಮರಣ ಹೊಂದಿದರೆ ಪ್ರತಿ ತಿಂಗಳು ಕನಿಷ್ಟ ಆರು ಸಾವಿರ ರೂ.ಪಿಂಚಣಿ ಕೊಡಬೇಕು. ಗ್ರಾಮ ಪಂಚಾಯಿತಿಗಳಿಗೆ ಎರಡನೆ ಡಾಟಾ ಎಂಟ್ರಿ ಆಪರೇಟರ್ಸ್ ಹುದ್ದೆಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ ಈಗಾಗಲೆ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್ಸ್‍ಗಳನ್ನು ನೇಮಕ ಮಾಡಿಕೊಂಡು ಮುಂದುವರೆಸಬೇಕು. ಕಂಪ್ಯೂಟರ್ ಜ್ಞಾನ ಹೊಂದಿದವರಿಗೆ ಅವಕಾಶ ಕೊಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

 

ನೀರುಗಂಟಿಗಳಿಗೆ ಮಲ್ಪಿ ಪರ್ಪಸ್ ಎನ್ನುವುದನ್ನು ಕೈಬಿಟ್ಟು ನಿರ್ಧಿಷ್ಟವಾದ ಕೆಲಸ ನೀಡಬೇಕು. ಆದಾಯಕ್ಕನುಗುಣವಾಗಿ ಕರವಸೂಲಿಗಾರರ ಹುದ್ದೆಗಳನ್ನು ನಿಗಧಿಪಡಿಸಬೇಕು. ಪ್ರತಿಯೊಂದು ಗ್ರಾಮ ಪಂಚಾಯಿತಿಗಳಿಗೆ ಲೆಕ್ಕ ಸಹಾಯಕ ಹುದ್ದೆ ಸೃಷ್ಟಿಸಿ ಐ.ಪಿ.ಡಿ.ಸಾಳಪ್ಪ ವರದಿಯಂತೆ ಸ್ವಚ್ಚತಾಗಾರರನ್ನು ನೇಮಿಸಬೇಕು.
ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ 23 ಅಸಂಘಟಿತ ವಲಯದ ಕಾರ್ಮಿಕರಿಗೆ ಅಪಘಾತದಿಂದಾದ ಮರಣ, ಅಂಗವೈಕಲ್ಯ
ಚಿಕಿತ್ಸೆಗೆ ಪರಿಹಾರವನ್ನು ಜಾರಿ ಮಾಡಿರುವುದು ಸರಿಯಷ್ಟೆ. ಕಾರ್ಮಿಕರು ಜೀವಂತವಾಗಿರುವಾಗಲೆ ನೆರವಾಗುವಂತ ಭವಿಷ್ಯನಿಧಿ, ಪಿಂಚಣಿ, ಶಿಕ್ಷಣ, ಆರೋಗ್ಯ ಇನ್ನು ಮುಂತಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಜಾರಿಗೊಳಿಸಬೇಕು. ಹಮಾಲಿ ಕಾರ್ಮಿಕರು ಸೇರಿದಂತೆ ವಿವಿಧ ವಲಯದ ಅಸಂಘಟಿತ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ಸಿದ್ದಪಡಿಸಿರುವ ಭವಿಷ್ಯ ನಿಧಿ ಯೋಜನೆ (ಪಶ್ಚಿಮ ಬಂಗಾಳ ಮಾದರಿ) ಯಂತೆ ಕಾನೂನು ಸ್ವರೂಪದಲ್ಲಿ ಜಾರಿಗೊಳಿಸಲು 2024-25 ನೇ ರಾಜ್ಯ ಬಜೆಟ್‍ನಲ್ಲಿ ಐದು ನೂರು ಕೋಟಿ ರೂ.ಗಳನ್ನು ಮೀಸಲಿಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಡಿ.ಎಂ.ಮಲಿಯಪ್ಪ, ಸಿ.ಕೆ.ಗೌಸ್‍ಪೀರ್, ಟಿ.ನಿಂಗಣ್ಣ, ಹೆಚ್.ಓ.ನಾಗರಾಜ್, ಟಿ.ತಿಪ್ಪೇಸ್ವಾಮಿ, ನಿಂಗಮ್ಮ ಇವರುಗಳು ಪ್ರತಿಭಟನೆಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment