ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 21 : ಜಿಲ್ಲೆಯಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಜೂಜಾಟ ಪ್ರಕರಣಗಳ ವಿರುದ್ದ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ಈ ಕಾರ್ಯಾಚರಣೆಯು ಇದೇ ಮಾರ್ಚ್ 17 ರಿಂದ 21 ರವರೆಗೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 230 ಜೂಜಾಟದ ಪ್ರಕರಣಗಳು ದಾಖಲಾಗಿದ್ದು, 1189 ಆರೋಪಿಗಳನ್ನು ಮತ್ತು ₹.15,48,925 (ಹದಿನೈದು ಲಕ್ಷದ ನಲವತ್ತೆಂಟು ಸಾವಿರದ ಒಂಬೈನೂರ ಇಪ್ಪತ್ತೈದು ರೂಪಾಯಿ) ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುಗಾದಿ ಹಬ್ಬದ ಸಂದರ್ಭದಲ್ಲಿ ಇಸ್ಪೀಟ್ ಆಟಕ್ಕೆ ಕಡಿವಾಣ ಹಾಕಲು ಪೋಲೀಸ್ ಇಲಾಖೆಯು ಹಲವು ಕ್ರಮಗಳನ್ನ ಕೈಗೊಳ್ಳಲಾಗಿತ್ತು.








