ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 21 : ಜಿಲ್ಲೆಯಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಜೂಜಾಟ ಪ್ರಕರಣಗಳ ವಿರುದ್ದ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ಈ ಕಾರ್ಯಾಚರಣೆಯು ಇದೇ ಮಾರ್ಚ್ 17 ರಿಂದ 21 ರವರೆಗೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 230 ಜೂಜಾಟದ ಪ್ರಕರಣಗಳು ದಾಖಲಾಗಿದ್ದು, 1189 ಆರೋಪಿಗಳನ್ನು ಮತ್ತು ₹.15,48,925 (ಹದಿನೈದು ಲಕ್ಷದ ನಲವತ್ತೆಂಟು ಸಾವಿರದ ಒಂಬೈನೂರ ಇಪ್ಪತ್ತೈದು ರೂಪಾಯಿ) ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುಗಾದಿ ಹಬ್ಬದ ಸಂದರ್ಭದಲ್ಲಿ ಇಸ್ಪೀಟ್ ಆಟಕ್ಕೆ ಕಡಿವಾಣ ಹಾಕಲು ಪೋಲೀಸ್ ಇಲಾಖೆಯು ಹಲವು ಕ್ರಮಗಳನ್ನ ಕೈಗೊಳ್ಳಲಾಗಿತ್ತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











