Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಏಪ್ರಿಲ್ 03 ರಂದು ಚುಟುಕು ಕವಿ ಎಸ್. ಗಂಗಾಧರಪ್ಪರವರ ‘ಹನಿಜೇನು” ಕವನ ಸಂಕಲನ ಬಿಡುಗಡೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಏ. 01 : ವಿದ್ಯಾ ನಗರದ ಆಶೀರ್ವಾದ ಪ್ರಕಾಶನದವತಿಯಿಂದ ಹೆಚ್.ಡಿ.ಪುರದ ಚುಟುಕು ಕವಿ ಎಸ್. ಗಂಗಾಧರಪ್ಪರವರ ‘ಹನಿಜೇನು” ಕವನ ಸಂಕಲನ ಬಿಡುಗಡೆ ಸಮಾರಂಭವೂ ಏ.3ರ ಶುಕ್ರವಾರ ನಗರದ ಶ್ರೀ ಮುರುಘಾಮಠದ ಅಲ್ಲಮಪ್ರಭು ಸಂಶೋಧನಾ ಕೇಂದ್ರದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ದಾವಣಗೆರೆಯ ವಿರಕ್ತಮಠದ ಡಾ.ಶ್ರೀ ಬಸವಪ್ರಭು ಸ್ವಾಮಿಗಳು ವಹಿಸಲಿದ್ದಾರೆ. ಶ್ರೀ ಮುರುಘಾಮಠದ ಶ್ರೀ ಬಸವ ಮುರುಘೇಂದ್ರ ಸ್ವಾಮಿಗಳು ಸಮ್ಮುಖವನ್ನು ವಹಿಸಲಿದ್ದಾರೆ. ಕವನ ಸಂಕಲನವನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತಾಧಿಕಾರಿಗಳಾದ ಡಾ. ಶ್ರೀ ಬಸವಕುಮಾರ ಸ್ವಾಮಿಗಳು ಬಿಡುಗಡೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಇತಿಹಾಸ ಸಂಶೋಧಕರಾದ ಡಾ.ಬಿ.ರಾಜಶೇಖರಪ್ಪ ವಹಿಸಲಿದ್ದಾರೆ.

ಕವನ ಸಂಕಲನವನ್ನು ಕುರಿತು ಚಿಂತಕರು, ಆರ್ಥಿಕ ತಜ್ಞರಾದ ಡಾ.ಜಿ.ಎನ್.ಮಲ್ಲಿಕಾರ್ಜನಪ್ಪ ಮಾತನಾಡ ಲಿದ್ದಾರೆ. ಹಿರಿಯೂರು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಡಾ.ಪ್ರಮೋದ್, ಸಿಸಿಎ, ಕಾನೂನು ಸಲಹೆಗಾರರಾದ ನಾಗರಾಜ್ ಸಂಗಮ್ ಹಾಗೂ ಹೆಚ್.ಡಿ.ಪುರದ ಜಿ.ಎಸ್.ಅಣ್ಣಪ್ಪ ಭಾಗವಹಿಸಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...