Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಥ್ರೋ ಬಾಲ್ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಗೌಡಿಹಳ್ಳಿ ಪ್ರೌಢಶಾಲಾ ವಿದ್ಯಾರ್ಥಿನಿಯರು

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್ ‌.28 : ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಗೌಡಿಹಳ್ಳಿಯ ಶ್ರೀ ಬಸವೇಶ್ವರ ಗ್ರಾಮಾಂತರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ರಾಜ್ಯಮಟ್ಟದ 17 ವರ್ಷ ವಯೋಮಿತಿ ಒಳಗಿನ ಥ್ರೋ ಬಾಲ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಾ ರಾಷ್ಟ್ರಮಟ್ಟದ ಕ್ರೀಡಾಸ್ಪರ್ಧೆಯಲ್ಲಿ ಆಯ್ಕೆಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಡಿಸೆಂಬರ್ 26  ಮತ್ತು 27 ರಂದು  ರಾಜ್ಯಮಟ್ಟದ 17 ವರ್ಷ ವಯೋಮಿತಿ ಒಳಗಿನ ಥ್ರೋ ಬಾಲ್ ಕ್ರೀಡಾಕೂಟ ನೆರವೇರಿತು.

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಾದ ಸ್ವಪ್ನ,  ಸಾರಿಕಾ, ಮನವಿ, ಮಾನ್ಯ, ಐಶ್ವರ್ಯ, ಸಾಕ್ಷಿ ,ರಮ್ಯಾ ಇವರಿಗೆ
ಡಿಡಿಪಿಐ ರವಿಶಂಕರ್ ರೆಡ್ಡಿ, ಎ ಪರಶುರಾಮಪ್ಪ, ವಿಭಾಗೀಯ ಉಪ ನಿರ್ದೇಶಕರು (ದೈಹಿಕ ಶಿಕ್ಷಣ) ಮೈಸೂರು, ಚಿದಾನಂದ ಸ್ವಾಮಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ,ಎಂ ಎಚ್ ಜಯಣ್ಣ ವಿಶ್ರಾಂತ ದೈಹಿಕ ಶಿಕ್ಷಣ ಅಧಿಕಾರಿ, ಸುನಿಲ್ ನಾಯ್ಕ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ಚಳ್ಳಕೆರೆ .ಶಾಲೆಯ ಮುಖ್ಯ ಶಿಕ್ಷಕರಾದ  ರಾಮಚಂದ್ರಪ್ಪ, ದೈಹಿಕ ಶಿಕ್ಷಣ ಶಿಕ್ಷಕರಾದ ಶಿವಕುಮಾರ್ ಅವರು ಜಿಲ್ಲಾ ಉಪ ನಿರ್ದೇಶಕರ ಕಚೇರಿಯಿಂದ ಅಭಿನಂದಿಸಿರುತ್ತಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment