ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹಾಗೂ ವಿವಿಧ ಮಠಾಧೀಶರ ಆಶೀರ್ವಾದ ಪಡೆದರು. ನಟ ಶಿವರಾಜಕುಮಾರ ಜತೆ ಇದ್ದರು.
ಬಳಿಕ ನಿಟ್ಟೂರಿನ ನಾರಾಯಣ ಗುರು ಮಹಾಸಂಸ್ಥಾನ ಮಠದ ರೇಣುಕಾನಂದ ಸ್ವಾಮೀಜಿ, ಹೊಸದುರ್ಗದ ಕುಂಚಿಟಿಗ ಮಹಾಸಂಸ್ಥಾನ ಮಠದ ಶಾಂತವೀರ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ, ತಂಗಡಗಿ ಹಡಪದ ಅಪ್ಪಣ್ಣ ಗುರುಪೀಠದ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಕೇತೇಶ್ವರ ಸ್ವಾಮೀಜಿ, ಕುಂಬಾರ ಗುಂಡಯ್ಯ ಸ್ವಾಮೀಜಿ , ತಂಗನಹಳ್ಳಿ ಕಾಶಿ ಅನ್ನಪೂರ್ಣೇಶ್ವರಿ ಮಠದ ಮಹಾಲಿಂಗ ಸ್ವಾಮೀಜಿ, ಇರಕಲ್ ಮಠದ ಬಸವ ಪ್ರಸಾದ್ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಕಳೆದ ವರ್ಷ ವಿಧಾನ ಸಭೆ ಚುನವಣಾ ಪೂರ್ವಾ ಶ್ರೀಗಳಿಗೆ ನೀಡಿದ ಸಚಿವ ಮಧುಬಂಗಾರಪ್ಪ ಅವರ ವಾಗ್ದನದಂತೆ ಶಿವಮೊಗ್ಗದ ರವಿಕುಮಾರ ಅವರನ್ನು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಮಾಡಿದ್ದೇವೆ ಎಂದು ನೆನದರು.
ಶಿವರಾಜ ಕುಮಾರ ಅವರು ಶ್ರೀಗಳೊಂದಿಗೆ ಉಪಹಾರ ಸೇವಿಸುತ್ತ ಮಾತನಾಡಿ ಶಕ್ತಿಧಾಮ ಸೇವೆ ಜನಸೇವೆಗೆ ಪ್ರೇರಣೆ ಹೆಚ್ಚಿಸಿದೆ. ಜನಸೇವೆ ಜನಾರ್ಧನ ಸೇವೆ. ನಮ್ಮ ಕಡೆ ಉಸಿರು ಇರುವ ತನಕ ಅಬಲೆಯರಿಗೆ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಆಸರೆಯಾಗಿ ಪುನೀತ್ ಅವರ ಕನಸ್ಸನ್ನು ಈಡೇರಿಸುತ್ತೇವೆ ಎಂದು ನೆನೆದು ಭಾವುಕರಾದರು.
ಚುನಾವಣಾ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್,ಭೋವಿ ಅಭಿವೃದ್ದಿ ನಿಗಮದ ರಾಜ್ಯ ಘಟಕ ಅಧ್ಯಕ್ಷ ಎಸ್.ರವಿಕುಮಾರ್, ಚಿತ್ರದುರ್ಗ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಂ.ಕೆ.ತಾಜ್ ಪೀರ್, ಎನ್.ಡಿ.ಕುಮಾರ್, ಸಂದೀಪ,ದೇವಿಕುಮಾರ್, ಪ್ರಮುಖರಾದ ಬಿ.ಜಗದೀಶ್, ಧೀರರಾಜ್ ಹೊನ್ನವಿಲೆ, ದೇಶಾದ್ರಿ ಹೊಸ್ಮನೆ, ಕೆ.ಹರ್ಷ ಭೋವಿ, ತಿಮ್ಮರಾಜು, ಕೃಷ್ಣಪ್ಪ, ಸೊರಬ ಸುರೇಶ್ ಹಾವಣ್ಣನವರ್, ಸಾಗರ ಎಲ್. ಚಂದ್ರಪ್ಪ, ಶಿಕಾರಿಪುರದ ಸುನೀಲ್, ಭದ್ರಾವತಿಯ ಶಿವು ಪಾಟೀಲ್, ವಕೀಲ ಪ್ರಕಾಶ್ ಸೇರಿ ಭೋವಿ ಸಮಾಜದ ಪ್ರಮುಖರು ಇದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್