Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಚಳ್ಳಕೆರೆ ರಸ್ತೆಯ ಶ್ರೀ ಸಾಯಿಬಾಬಾ ಮಂದಿರದಲ್ಲಿ ಅದ್ಧೂರಿಯಾಗಿ ನೆರವೇರಿದ ಗುರುಪೂರ್ಣಿಮಾ ಮಹೋತ್ಸವ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜುಲೈ. 21 : ಗುರು ಪೂರ್ಣಿಮೆ ಹಿನ್ನೆಲೆಯಲ್ಲಿ ನಗರದ ಚಳ್ಳಕೆರೆ ರಸ್ತೆಯಲ್ಲಿ ಶ್ರೀ ಸಾಯಿ ಸಂಕಲ್ಪ ಸೇವಾ ಸಮಿತಿ ವತಿಯಿಂದ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಸಾಯಿಬಾಬಾ ಮಂದಿರದಲ್ಲಿ ವಿಜೃಂಭಣೆಯಿಂದ ಗುರುಪೂರ್ಣಿಮಾ (Guru Purnima 2024) ಮಹೋತ್ಸವ ನಡೆಯಿತು.

ಗುರು ಪೌರ್ಣಮಿ ಅಂಗವಾಗಿ ಸಾಯಿಮಂದಿರಲ್ಲಿ ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಆರಂಭಗೊಂಡವು. ಶ್ರೀ ಬಾಬಾ ಅವರಿಗೆ ಪಂಚಾಮೃತ ಅಭಿಷೇಕ, ಭಜನೆ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಸಂಜೆ 6 ಗಂಟೆಗೆ ಆರತಿ, 8 ಗಂಟೆಗೆ ಶೇಜ ಆರತಿ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಲಿವೆ.

ಗುರು ಪೌರ್ಣಮಿ ಮಹೋತ್ಸವ ಅಂಗವಾಗಿ ಸಾಯಿ ಬಾಬಾ ಮಂದಿರದಲ್ಲಿ ವಿವಿಧ ಬಣ್ಣದ ವಿದ್ಯುತ್ ದೀಪಾಲಂಕಾರ ಮತ್ತು ಹೂವಿನ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆಯಿಂದ ರಾತ್ರಿಯವರೆಗೂ ಸಾವಿರಾರು ಭಕ್ತರು ಗುರು ಪೌರ್ಣಮಿ ಮಹೋತ್ಸವ ಪೂಜೆಯಲ್ಲಿ ಪಾಲ್ಗೊಂಡು ಬಾಬಾರ ದರ್ಶನ ಪಡೆದರು. ನೆರೆದಿದ್ದ ಭಕ್ತರಿಗೆ ಅನ್ನದಾಸೋಹ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಶ್ರೀ ಸಾಯಿ ಸಂಕಲ್ಪ ಸೇವಾ ಸಮಿತಿಯ ಅಧ್ಯಕ್ಷರಾದ ತೇಜಸ್ವಿ, ಉಪಾಧ್ಯಕ್ಷರಾದ ಜಿ.ಟಿ. ಸುರೇಶ್, ಕಾರ್ಯದರ್ಶಿ ನಯನ, ಖಜಾಂಚಿ ವಿಶ್ವನಾಥ, ಸೋಮನಾಥ ಶೆಟ್ಟಿ, ಲಕ್ಷ್ಮಣ, ಚೇತನ್, ಸೋಮೇಗೌಡ, ಶ್ರೀಮತಿ ಶೈಲಜಾ ರೆಡ್ಡಿ, ಸೌಮ್ಯಾ ಸತ್ಯನಾರಾಯಣ, ಕೃಷ್ಣ ಹಾಗೂ ಭಕ್ತಾಧಿಗಳು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...