ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಹರಿವಾಯುಗುರು ಸೇವಾ ಟ್ರಸ್ಟ್ ವತಿಯಿಂದ ಆಚರಿಸುವ ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಟ್ರಸ್ಟ್ ನ ಕಾರ್ಯದರ್ಶಿ ಜೋಯ್ಸ್ ಹುಲಿರಾಜ್ ಅವರು ವೇದಘೋಷ ಮಾಡಿ ಸ್ವಾಗತಿಸಿದರು. ಸಂಚಾಲಕರಾದ ಗೋಪಾಲಕೃಷ್ಣ ಅವರು ದೇವತಾ ಪ್ರಾರ್ಥನೆ ಮಾಡಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಟಿ. ಕೆ. ನಾಗರಾಜ್,
ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವ್ಯವಸ್ಥಾಪಕರು ಪ್ರಾಣೇಶಾಚಾರ ಕೊಪ್ಪರ, ಉತ್ತರಾದಿ ಮಠದ ವ್ಯವಸ್ಥಾಪಕರಾದ ವಿದ್ವಾನ್ ಪ್ರಭಂಜನಾಚಾರ ಕೂಸನೂರು, ಬ್ರಾಹ್ಮಣ ಸಂಘದ ನಿರ್ದೇಶಕರಾದ ರಾಘವೇಂದ್ರ, ಜಗಳೂರಿನ ಉಪ ತಹಶೀಲ್ದಾರ್ ಬದರಿನಾಥ, ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ಪ್ರೊಟೋಕಾಲ್ ಆಫೀಸರ್ ಶ್ರೀ ವೇಣುಗೋಪಾಲ್ ಸೇರಿದಂತೆ ಪಾರಾಯಣದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











