Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಮುಖ್ಯಪೇದೆಗೆ ಲಘು ಹೃದಯಾಘಾತ : ಅಪಾಯದಿಂದ ರಮೇಶ್ ಪಾರು..!

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 19 : ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾಕಷ್ಟು ಅನಾಹುತಗಳು ನಡೆದು ಹೋಗಿವೆ. ವಯಸ್ಸಿನ ಮಿತಿಯೇ ಇಲ್ಲದೇ ಹೃದಯಾಘಾತದಂತ ಘಟನೆಗಳು ನಡೆಯುತ್ತಿವೆ. ಮುಖ್ಯವಾಗಿ ನಾವೂ ತಿನ್ನುವ ಆಹಾರ, ದೇಹಕ್ಕೆ ಅತಿಯಾದ ವ್ಯಾಯಾಮ, ಒತ್ತಡದಿಂದ ಜೀವನ ಕಳೆಯುತ್ತಿರುವುದೇ ಆಗಿದೆ‌‌. ಅದರಲ್ಲೂ ಪೊಲೀಸ್ ಕೆಲಸದಲ್ಲಿರುವವರದ್ದು ಇನ್ನು ಹೆಚ್ಚಿನ ಒತ್ತಡದಲ್ಲಿರುತ್ತಾರೆ. ಕೇಸುಗಳು, ಜನರ ರಕ್ಷಣೆ ಅಂತ ಓಡಾಟ ಇದ್ದೆ ಇರುತ್ತದೆ. ಧಣಿದ ದೇಹಕ್ಕೆ ಆರಾಮು ಇಲ್ಲದೆ ಹೋದಾಗ ಹಲವು ರೀತಿಯ ಆರೋಗ್ಯ ಸಮಸ್ಯೆ ಕಾಡುತ್ತದೆ. ಹೀಗಾಗಿ ಎಚ್ಚರದಿಂದ ಇರಬೇಕಾಗುತ್ತದೆ. ಚಿತ್ರದುರ್ಗದ ಮುಖ್ಯ ಪೇದೆ ರಮೇಶ್ ಅವರ ಅದೃಷ್ಟ ಚೆನ್ನಾಗಿತ್ತು ಎನಿಸುತ್ತದೆ. ಯಾವುದೇ ಅಪಾಯವಿಲ್ಲದೆ ಹೃದಯಾಘಾತದಂತ ಸಮಸ್ಯೆಯಿಂದ ಪಾರಾಗಿದ್ದಾರೆ.

ಹೌದು ಮುಖ್ಯಪೇದೆ ರಮೇಶ್ ಅವರಿಗೆ ಲಘು ಹೃದಯಾಘಾತಕ್ಕೆ ಒಳಗಾಗಿದ್ದರು. ಸದ್ಯ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಯಾವುದೇ ರೀತಿಯ ತೊಂದರೆಯಾಗಿಲ್ಲ.

ರಮೇಶ್ ಅವರು ಚಿತ್ರದುರ್ಗದ ಸಶಸ್ತ್ರ ಮೀಸಲು ಪಡೆಯ ಮುಖ್ಯ ಪೇದೆಯಾಗಿ ಕೆಲಸ ಮಾಡುತ್ತಿದ್ದಾರೆ. ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದಾಗ ಲಘು ಹೃದಯಾಘಾತವಾಗಿದೆ. ತಕ್ಷಣ ರಮೇಶ್ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಚಿಕಿತ್ಸೆಗೆ ಸ್ಪಂದಿಸಿದ್ದು, ಯಾವುದೇ ಸಮಸ್ಯೆ ಆಗದಂತೆ ಬದುಕುಳಿದಿದ್ದಾರೆ. ಆಸ್ಪತ್ರೆಯಲ್ಲಿಯೇ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಎಸ್ಪಿ ರಂಜಿತ್ ಬಂಡಾರು ಅವರು ಆಸ್ಪತ್ರೆಗೆ ಭೇಟಿ ನೀಡಿ‌, ಯೋಗಕ್ಷೇಮ ವಿಚಾರಿಸಿಕೊಂಡಿದ್ದಾರೆ. ಮುಖ್ಯಪೇದೆ ರಮೇಶ್ ಗೆ ಆತ್ಮಸ್ಥೈರ್ಯ ಹೇಳಿದ್ದು, ಎಸ್ಪಿ ರಂಜಿತ್ ಬಂಡಾರುಗೆ ಡಿಎಆರ್ ಡಿವೈಎಸ್ಪಿ ಗಣೇಶ್ ಸಾಥ್ ನೀಡಿದ್ದಾರೆ. ಆದಷ್ಟು ಬೇಗ ಆರೋಗ್ಯ ಸುಧಾರಿಸಲಿ ಎಂದೇ ಹಾರೈಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...