ಚಿತ್ರದುರ್ಗ | ಆರೋಗ್ಯ ಇಲಾಖೆಯ ನೌಕರ ಅವಿನಾಶ್ ನಿಧನ

1 Min Read

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ತಾಲ್ಲೂಕಿನ ಹಾಯ್ಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಅವಿನಾಶ್ (43 ವರ್ಷ) ಇಂದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಶುಕ್ರವಾರ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಅಪಘಾತವಾಗಿದ್ದು, ತಲೆಗೆ ಪೆಟ್ಟು ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೂ ಕೂಡಾ ಚಿಕಿತ್ಸೆ ಫಲಿಸದೇ ಇಂದು (ಭಾನುವಾರ) ಸಂಜೆ ಕೊನೆಯುಸಿರೆಳೆದರು.

ಮೃತರು ಪತ್ನಿ, ಓರ್ವ ಪುತ್ರಿ, ಪುತ್ರ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಸೋಮವಾರ) ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿ.

ಅವಿನಾಶ್ ಅವರ ಅಕಾಲಿಕ ನಿಧನಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *