Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಹೃದಯ ವಿದ್ರಾವಕ ಘಟನೆ : ಇಬ್ಬರು ಮಕ್ಕಳ ಜೊತೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ..!

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಮಕ್ಕಳನ್ನು ಒಂಬತ್ತು ತಿಂಗಳು ಹೆತ್ತು, ಹೊತ್ತು ಸಾಕಿ ಸಲುಹಿದ ತಾಯಿ, ತನ್ನದೇ ಕರುಳ ಬಳ್ಳಿಯ ಮಕ್ಕಳನ್ನು ಕೊಂದು ತಾನೂ ಸಾಯುತ್ತಾಳೆ ಎಂದರೆ ಆಕೆಯ ಮನಸ್ಸು ಹೇಗಾಗಿರಬಹುದು.

ಇಬ್ಬರು ಪುಟಾಣಿ ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಇಂದು ಬೆಳಿಗ್ಗೆ (ಮಂಗಳವಾರ) 9 ಗಂಟೆ ಸುಮಾರಿಗೆ ನಡೆದಿದೆ.

24 ವರ್ಷದ ಮಾರಕ್ಕ ತನ್ನಿಬ್ಬರು ಪುಟಾಣಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 4 ವರ್ಷದ ನಯನ್ ಹಾಗೂ 2 ವರ್ಷದ ಹರ್ಷವರ್ಧನ್ ತಮ್ಮ ತಾಯಿಯೊಂದಿಗೆ ತಮ್ಮ ಜೀವನವನ್ನು ಮುಗಿಸಿಕೊಂಡಿದ್ದಾರೆ.

ಈ ತಾಯಿ, ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಎಂಬುದಕ್ಕೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಊರ ಹೊರಗಿರುವ ಅವರ ಮನೆಯ ಸಮೀಪದ ಬಣಿವೆ ಹಿತ್ತಲಿನಲ್ಲಿ ಬೇಲಿಗೆ ಬೆಂಕಿ ಹಚ್ಚಿ, ಆ ಬೆಂಕಿಯಲ್ಲಿ ತನ್ನ ಇಬ್ಬರು ಮಕ್ಕಳನ್ನು ಮೊದಲು ಹಾಕಿ, ಬಳಿಕ ತಾಯಿಯೂ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಅಡಿಷನಲ್ ಎಸ್.ಪಿ. ಡಿ.ವೈ.ಎಸ್.ಪಿ ಸೇರಿದಂತೆ ಪೋಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

ಈ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ : ಬಿ.ಎನ್. ಚಂದ್ರಪ್ಪ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರು ಶುಕ್ರವಾರ ನಡೆದ ಚುನಾವಣೆಯಲ್ಲಿ ನನ್ನ ಭವಿಷ್ಯ ನಿರ್ಣಯಿಸುತ್ತಾರೆ.

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

error: Content is protected !!