Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕೆ.ಜಿ.ಜಗದೀಶ್‍ ಅವರಿಗೆ ಹೃದಯಸ್ಪರ್ಶಿ ಸನ್ಮಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 12 : ಸರ್ಕಾರಿ ನೌಕರರು ಕಚೇರಿಗೆ ಕೆಲಸದ ನಿಮಿತ್ತ ಬರುವ ಸಾರ್ವಜನಿಕರ ಸೇವೆಗೆ ಮೀಸಲಿರಬೇಕೆಂದು ರಾಷ್ಟ್ರೀಯ ಹೆದ್ದಾರಿ ವಲಯದ ನಿವೃತ್ತ ಮುಖ್ಯ ಇಂಜಿನಿಯರ್ ಕೆ.ಜಿ.ಜಗದೀಶ್ ಕರೆ ನೀಡಿದರು.

ಜಿಲ್ಲಾ ಗುತ್ತಿಗೆದಾರರ ಸಂಘ, ಲೋಕೋಪಯೋಗಿ, ಯೋಜನಾ, ಕುಡಿಯುವ ನೀರು ಪೂರೈಕೆ ಯೋಜನೆ, ಪಂಚಾಯತ್‍ರಾಜ್ ಇಂಜಿನಿಯರಿಂಗ್, ಸಣ್ಣ ನೀರಾವರಿ
ರಾಷ್ಟ್ರೀಯ ಹೆದ್ದಾರಿ ವಿಭಾಗಗಳು, ನಿರ್ಮಿತಿ ಕೇಂದ್ರ ಇವುಗಳ ಸಹಯೋಗದೊಂದಿಗೆ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಅಧಿಕಾರವಿರುವುದು ದರ್ಪ ತೋರುವುದಕ್ಕಲ್ಲ ಎನ್ನುವುದನ್ನು ನಾನು ಸೇವೆಗೆ ಸೇರಿದಾಗಿನಿಂದಲೂ ಮನವರಿಕೆ ಮಾಡಿಕೊಂಡು ಕೈಲಾದಷ್ಟು ಜನಸೇವೆ ಸಲ್ಲಿಸಿದ್ದೇನೆ. ಶೇ.1 ರಷ್ಟು ಮಂದಿಗೆ ಮಾತ್ರ ಸರ್ಕಾರಿ ನೌಕರಿ ಸಿಗುತ್ತದೆ. ಉಳಿದವರಿಗೆ ಈ ಅವಕಾಶವಿಲ್ಲ. ನನಗೆ ಜನಸಾಮಾನ್ಯರು ಕೊಟ್ಟ ನೌಕರಿಯನ್ನು ಅವರ ಸೇವೆಗಾಗಿಯೇ ಮುಡುಪಾಗಿಟ್ಟಿದ್ದೆ. ನನ್ನ ಅಧಿಕಾರವಧಿಯಲ್ಲಿ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿ ಕೆಲವು ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡು ಕೆಲಸ ಮಾಡಿದ್ದೇನೆ. ನಿವೃತ್ತಿಯ ನಂತರವೂ ಈ ಜಿಲ್ಲೆಗೆ ನನ್ನ ಸೇವೆಯಿರುತ್ತದೆಂದು ಭರವಸೆ ನೀಡಿದರು.

ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ನಿವೃತ್ತ ಅಧೀಕ್ಷಕ ಇಂಜಿನಿಯರ್ ಎಂ.ರಮೇಶ್ ನಿವೃತ್ತಿ ನಂತರ ಜೀವನ ಕಷ್ಟಕರವಾಗಿರುತ್ತದೆ. ಸುಮ್ಮನೆ ಕುಳಿತು ಕಾಲ ಕಳೆಯುವುದು ಬಲು ಬೇಸರ. ಅಭಿವೃದ್ದಿ ಕೆಲಸಗಳಿಗೆ ಇವರ ಕೊಡುಗೆ ಸಾಕಷ್ಟಿದೆ. ಸರ್ಕಾರದಿಂದ ಅನುದಾನ ತಂದು ಅದನ್ನು ಯಾವ ಕಾಮಗಾರಿಗೆ ಹೇಗೆ ಎಷ್ಟು ಬಳಸಬೇಕೆಂಬ ಬುದ್ದಿವಂತಿಕೆಯಿಂದ ಕೆ.ಜಿ.ಜಗದೀಶ್ ಕೆಲಸ ಮಾಡುತ್ತಿದ್ದರು. ನಿವೃತ್ತಿಯ ನಂತರವೂ ಅವರ ಸಲಹೆ ಸಹಕಾರವನ್ನು ಇಂಜಿನಿಯರ್‍ಗಳು ಪಡೆದುಕೊಳ್ಳುವುದು ಉತ್ತಮ ಎಂದು ಹೇಳಿದರು.

ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಮಾತನಾಡುತ್ತ ಮುಂದಿನ ಯೋಜನೆಗಳ ಬಗ್ಗೆ ನಿಮ್ಮ ಕನಸು ಸಾಕಾರಗೊಳ್ಳಲಿ. ಸಹಾಯಕ ಕಾರ್ಯಪಾಲಕ ಇಂಜಿನಿಯರ್‍ಗಳನ್ನು ಜೊತೆಯಲ್ಲಿಟ್ಟುಕೊಳ್ಳಿ. ಬಯಲುಸೀಮೆ ಚಿತ್ರದುರ್ಗ ಜಿಲ್ಲೆ ಅಭಿವೃದ್ದಿಗೆ ನಿಮ್ಮ ಸೇವೆ ಸಿಗಲೆಂದು ಕೆ.ಜಿ.ಜಗದೀಶ್‍ರವರಲ್ಲಿ ಮನವಿ ಮಾಡಿದರು.

ನಿವೃತ್ತ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಂಗನಾಥ್ ಮಾತನಾಡಿ ಸದಾ ಸರ್ಕಾರಿ ನೌಕರರ ಪರವಾಗಿದ್ದ ಕೆ.ಜಿ.ಜಗದೀಶ್‍ರವರು ಕರ್ನಾಟಕದಲ್ಲಿ ಭೀಕರ ಬರಗಾಲ ಕಾಣಿಸಿಕೊಂಡಾಗ ನೌಕರರಿಂದ ಸಂಗ್ರಹಿಸಿದ 74 ಲಕ್ಷ ರೂ.ಗಳನ್ನು ಸರ್ಕಾರಕ್ಕೆ ನೀಡಿ ಮಾನವೀಯತೆ ಮೆರೆದರು. 2013 ರಲ್ಲಿ ಚಿತ್ರದುರ್ಗದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ನಡೆದಾಗಲು ಇವರ ಪಾತ್ರವಿತ್ತು. ಅನೇಕರಿಗೆ ಸಹಾಯ ಮಾಡಿದ್ದಾರೆ. ಸಹನೆ, ತೃಪ್ತಿ, ಮಾನವೀಯತೆಯನ್ನಿಟ್ಟುಕೊಂಡು ಅಧಿಕಾರವಧಿಯಲ್ಲಿ ಕೆಲಸ ಮಾಡಿರುವ ನಿಮ್ಮ ನಿವೃತ್ತಿ ಜೀವನ ಸುಖಮಯವಾಗಿರಲೆಂದು ಹಾರೈಸಿದರು.

ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಲ್ಲೇಶಪ್ಪ ಮಾತನಾಡಿದರು. ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಬಿ.ಎಸ್.ಹರೀಶ್‍ಕುಮಾರ್, ಕಾರ್ಯಪಾಲಕ ಇಂಜಿನಿಯರ್‍ಗಳಾದ ನಾಗರಾಜ್, ಎಲ್.ಹನುಮಂತಪ್ಪ, ಕೆ.ಮಲ್ಲಿಕಾರ್ಜುನ್ ಇವರುಗಳು ವೇದಿಕೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...