Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಅದ್ದೂರಿಯಾಗಿ ನಡೆದ ಉಚ್ಚಂಗಿ ಯಲ್ಲಮ್ಮ ಅಮ್ಮನವರ ಮೆರವಣಿಗೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮೇ. 24 : ನಗರದ ಗ್ರಾಮ ದೇವತೆಗಳಲ್ಲಿ ಒಂದಾದ ಉಚ್ಚಂಗಿ ಯಲ್ಲಮ್ಮ ಅಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ಅಮ್ಮನವರ ರಥೋತ್ಸವವನ್ನು ಇಂದು ನಗರದ ವಿವಿಧ ಬಡಾವಣೆಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಮೇ. 14ರಂದು ಅಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ಸಾರನ್ನು ಹಾಕಲಾಯಿತು. ಮೇ. 18ರಂದು ಅಮ್ಮನವರಿಗೆ ಕಂಕಣಧಾರಣೆ, ಮದಲಿಂಗಿತ್ತಿಯ ಪೂಜೆಯನ್ನು ಮಾಡಲಾಯಿತು. ರಾತ್ರಿ ಅಮ್ಮನವರಿಗೆ ಸಿಂಹ ಉತ್ಸವವನ್ನು ನೇರವೇರಿಸಲಾಯಿತು. ಮೇ. 19ರಂದು ಸರ್ಪೋತ್ಸವ ಮೇ.20 ರಂದು ನವಿಲು ಉತ್ಸವ, ಮೇ. 21ರಂದು ದೇವಿಗೆ ಅಭೀಷೇಕ ಹಾಗೂ ಮಹಾ ಮಂಗಳಾರತಿಯನ್ನು ನಡೆಸಲಾಯಿತು.


ಮೇ. 22ರಂದು ದೇವಿಯು ಕೆಳಗಿಳಿದು ರಾಜಬೀದಿಯಲ್ಲಿ ಕುದುರೆ ಉತ್ಸವ ಮತ್ತು ಅನ್ನ ಸಂತರ್ಪಣೆಯನ್ನು ನಡೆಸಲಾಯಿತು. ಮೇ. 23ರಂದು ದೇವಿಗೆ ಅಭೀಷೇಕ ಮಹಾ ಮಂಗಳಾರತಿ ನಡೆದಿದ್ದು, ಮೇ. 24 ರ ಇಂದು ದೇವಿಗೆ ಅಭೀಷೇಕ ಮತ್ತು ಮಹಾ ಮಂಗಳಾರತಿಯ ನಂತರ ರಥೋತ್ಸವವನ್ನು ನಗರದಲ್ಲಿ ನಡೆಸಲಾಯಿತು.

ಮೇ. 25ರ ನಾಳೆ ಶನಿವಾರ ಮಧ್ಯಾಹ್ನ 12ಕ್ಕೆ ದೇವಿಗೆ ವಿಶೇಷ ಭಂಡಾರ ಪೂಜೆ ಸಂಜೆ 6ಕ್ಕೆ ಅಮ್ಮನವರ ಸಿಡಿ ಉತ್ಸವ ನಡೆಯಲಿದೆ. ಮೇ. 23 ರ ಬೆಳಿಗ್ಗೆ 8 ಕ್ಕೆ ದೇವಿಗೆ ಅಭೀಷೇಕ ರಾತ್ರಿ 9ಕ್ಕೆ ಜೋಗಪ್ಪ ಮತ್ತು ಜೋಗಮ್ಮನವರಿಂದ ಓಕುಳಿ ಕಾರ್ಯಕ್ರಮ ನಡೆಯಲಿದ್ದು ಮೇ. 28 ರಂದು ಬೆಳಿಗ್ಗೆ 8 ಕ್ಕೆ ದೇವಿಗೆ ಅಭೀಷೇಕ ಕಂಕಣ ವಿಸರ್ಜನೆಯೊಂದಿಗೆ ಈ ವರ್ಷದ ಜಾತ್ರಾ ಕಾರ್ಯಕ್ರಮ ಮುಕ್ತಾಯವಾಗಲಿದೆ
ಇಂದು ಬೆಳಿಗ್ಗೆ ದೇವಸ್ಥಾನದಲ್ಲಿ ಅಮ್ಮನವರಿಗೆ ಅಭೀಷೇಕವನ್ನು ಮಾಡಿ ವಿವಿಧ ರೀತಿಯ ಹೂಗಳಿಂದ ಆಲಂಕಾರವನ್ನು ಮಾಡಲಾಗಿತು.

ತದ ನಂತರ ದೇವಾಲಯದ ಹೊರಗಡೆಯಲ್ಲಿ ಅಮ್ಮನವರನ್ನು ಎತ್ತಿನ ಗಾಡಿಯಲ್ಲಿ ಕುದುರೆಯ ಮೇಲೆ ಕುಳ್ಳರಿಸಿ ದೇವಿಯ ಆಲಂಕಾರವನ್ನು ಮಾಡಿ ಆರು ಕೈಗಳಿಗೂ ಸಹಾ ವಿವಿಧ ರೀತಿಯ ಆಯುಧಗಳನ್ನು ನೀಡಲಾಗಿತು, ಅಮ್ಮನವರು ಮುಖ ಪದ್ಮದ ತಲೆಗೆ ಬಂಗಾರ ಬಣ್ಣದ ಕೀರಿಟವನ್ನು ಧರಿಸಿದ್ದು ಅದರ ಮೇಲೆ ಐದು ಹೆಡೆ ನಾಗರಹಾವನ್ನು ನಿರ್ಮಾಣ ಮಾಡಲಾಗಿತು.

ದೇವಿಯ ಹಿಂದಗಡೆಯಲ್ಲಿ ಕಲರ್, ಬಿಳಿ, ಶಾವಂತಿಗೆ, ಚಂಡಹೂ ಸೇರಿದಂತೆ ವಿವಿಧ ರೀತಿಯ ಹೂಗಳಿಂದ ಆಲಂಕಾರವನ್ನು ಮಾಡಲಾಗಿತು. ಮುಂದಗಡೆಯ ಎರಡು ಕಡೆಗಳಲ್ಲಿ ನವೀಲನ್ನು ಆಕೃತಿ ಮತ್ತು ತಲೆಯ ಮೇಲೆ ಕಮಲದ ಆಕೃತಿಯನ್ನು ಸಹಾ ನಿರ್ಮಾಣ ಮಾಡಲಾಗಿತು.
ಈ ಮೆರವಣಿಗೆಯಲ್ಲಿ ವೀರಗಾಸೆ, ಚಂಡೆ, ಟಾಷ್ಯೂ, ನಂದಿಧ್ವಜ, ಕೀಲು ಕುದುರೆ, ತಟ್ಟೆರಾಯ, ಉರುಮೆ, ಕಹಳೆ, ನಾದಸ್ವರ ಯಕ್ಷಗಾನದ ಆಲಂಕಾರಗಳು ಸೇರಿದಂತೆ ವಿವಿಧ ರೀತಿಯ ಜಾನಪದ ವಾದ್ಯಗಳು ಭಾಗವಹಿಸಿದ್ದವು.

ಈ ಸಂದರ್ಭದಲ್ಲಿ ಮದಕರಿ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಸಂದೀಪ್, ನಗರಸಭಾ ಸದಸ್ಯರಾದ ಚಂದ್ರಶೇಖರ್, ವೇದ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾದ ಎನ್.ಡಿ.ಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು. ವಿವಿಧ ರೀತಿಯ ಜಾನಪದ ಕಲಾ ತಂಡಗಳ ಸದ್ದಿಗೆ ಯುವಕರು ಹಾಗೂ ಮಕ್ಕಳು ಕುಣಿದು ಕುಪ್ಪಳಿಸಿದ ದೃಶ್ಯ ಕಂಡು ಬಂದಿತು.

 

ನಗರದ ಉಚ್ಚಂಗಿ ಯಲ್ಲಮ್ಮ ದೇವಾಲಯದಿಂದ ಪ್ರಾರಂಭವಾದ ಮೆರವಣಿಗೆ ಚಿಕ್ಕಪೇಟೆ, ಆನೆಬಾಗಿಲು, ಬುರುಜನಹಟ್ಟಿ, ಹೊಳಲ್ಕೆರೆ ರಸ್ತೆ, ಸಂತೇಪೇಟೆ ವೃತ್ತ, ಬಿ.ಡಿ.ರಸ್ತೆ, ಮದಕರಿ ವೃತ್ತ, ಜೋಗಿಮಟ್ಟಿ ರಸ್ತೆ, ಫಿಲ್ಟರ್ ಹೌಸ್ ರಸ್ತೆ, ಏಕನಾಥೇಶ್ವರಿ ಪಾದಗುಡಿಯ ಮೂಲಕ ಮರಳಿ ದೇವಾಲಯವನ್ನು ತಲುಪಿತು. ದಾರಿಯುದ್ದಕ್ಕು ಭಕ್ತಾಧಿಗಳು ಅಮ್ಮನವರ ದರ್ಶಕ್ಕೆ ಕಾದಿದ್ದು ಹಣ್ಣು-ಕಾಯಿಗಳನ್ನು ನೀಡಿ ಪೂಜೆಯನ್ನು ಮಾಡಿಸಿದರು.

ಈ ಕಾರ್ಯದಲ್ಲಿ ಮಕ್ಕಳು ಮಹಿಳೆಯರು ಪುರುಷರು ಸೇರಿದಂತೆ ಹಲವಾರು ಜನತೆ ತಾಯಿಯ ದರ್ಶನವನ್ನು ಪಡೆದು ಪುನೀತರಾದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಅಷ್ಠಮ ಸ್ಥಾನದ ಶನಿಯಿಂದ ದಂಪತಿಗಳಿಗೆ ಕುಟುಂಬ ಕಲಹ, ಹಣಕಾಸಿನ ತೊಂದರೆ

ಈ ರಾಶಿಯವರಿಗೆ ಅಷ್ಠಮ ಸ್ಥಾನದ ಶನಿಯಿಂದ ದಂಪತಿಗಳಿಗೆ ಕುಟುಂಬ ಕಲಹ, ಹಣಕಾಸಿನ ತೊಂದರೆ, ಉದ್ಯೋಗದಲ್ಲಿ ಕಿರಿ ಕಿರಿ, ಪ್ರೇಮಿಗಳಿಗೆ ವಿರಸ, ಶನಿವಾರ- ರಾಶಿ ಭವಿಷ್ಯ ಜುಲೈ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:50 ಶಾಲಿವಾಹನ

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

error: Content is protected !!