Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ನಿಯಮಬಾಹಿರ ಮದ್ಯ ಮಾರಾಟ : ಪ್ರಕರಣ ದಾಖಲು

---Advertisement---

ಚಿತ್ರದುರ್ಗ. ಮಾ.30: ನಿಯಮಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಚಿತ್ರದುರ್ಗ ನಗರ ಜೆ.ಸಿ.ಆರ್. ಬಡಾವಣೆಯ ಕಾರ್ತಿಕ್ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರ ವಿರುದ್ದ ಅಬಕಾರಿ ಕಾಯ್ದೆ ಹಾಗೂ ನಿಯಮಗಳ ಅನುಸಾರ ಪ್ರಕರಣ ದಾಖಲು ಮಾಡಲಾಗಿದೆ.

ಶುಕ್ರವಾರ ಸಂಜೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ನಗರದ ಗಾಂಧಿ ವೃತ್ತ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಪ್ರದೇಶಗಳ ಬಾರ್, ಎಂ.ಎಸ್.ಐ.ಎಲ್, ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಪಬ್‍ಗಳ ಮೇಲೆ ಅನಿರೀಕ್ಷತ ಭೇಟಿ ನೀಡಿ ತಪಾಸಣೆ ನಡೆಸಿದರು.

ಈ ವೇಳೆ ಕಾರ್ತಿಕ್ ಬಾರ್ ಅಂಡ್ ರೆಸ್ಟೋರೆಂಟ್‍ನಲ್ಲಿ, ಲಾಡ್ಜ್‍ನಲ್ಲಿ ತಂಗಿರುವ ಗ್ರಾಹಕರನ್ನು ಹೊರತು ಪಡಿಸಿ, ಹೊರಗಿನ ಗ್ರಾಹಕರಿಗೂ ಮದ್ಯ ಸರಬಾರಾಜು ಮಾಡುವುದು ಕಂಡು ಬಂದಿತು. ಈ ಹಿನ್ನಲೆಯಲ್ಲಿ ಅಬಕಾರಿ ಕಾಯ್ದೆ 1965ರ 36 ಹಾಗೂ 45 ಕಲಂಗಳು ಹಾಗೂ ಅಬಕಾರಿ ನಿಯಮಗಳ ಕಲಂ 3(7)ಬಿ, ಅಬಕಾರಿ ಪರವಾನಿಗೆ ನಿಯಮದ ಕಲಂ 6 ಅಡಿ ಪ್ರಕರಣ ದಾಖಲಿಸಲಾಗಿದೆ.

ಅನಿರೀಕ್ಷತ ತಪಾಸಣೆ ವೇಳೆ ತಹಶೀಲ್ದಾರ್ ಡಾ.ನಾಗವೇಣಿ, ಅಬಕಾರಿ ನಿರೀಕ್ಷಕ ಶೇಕ್ ಇಮ್ರಾನ್, ಉಪತಹಶೀಲ್ದಾರ್ ನಾಗರಾಜ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...