Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ನಿಯಮಬಾಹಿರ ಮದ್ಯ ಮಾರಾಟ : ಪ್ರಕರಣ ದಾಖಲು

Facebook
Twitter
Telegram
WhatsApp

ಚಿತ್ರದುರ್ಗ. ಮಾ.30: ನಿಯಮಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಚಿತ್ರದುರ್ಗ ನಗರ ಜೆ.ಸಿ.ಆರ್. ಬಡಾವಣೆಯ ಕಾರ್ತಿಕ್ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರ ವಿರುದ್ದ ಅಬಕಾರಿ ಕಾಯ್ದೆ ಹಾಗೂ ನಿಯಮಗಳ ಅನುಸಾರ ಪ್ರಕರಣ ದಾಖಲು ಮಾಡಲಾಗಿದೆ.

ಶುಕ್ರವಾರ ಸಂಜೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ನಗರದ ಗಾಂಧಿ ವೃತ್ತ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಪ್ರದೇಶಗಳ ಬಾರ್, ಎಂ.ಎಸ್.ಐ.ಎಲ್, ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಪಬ್‍ಗಳ ಮೇಲೆ ಅನಿರೀಕ್ಷತ ಭೇಟಿ ನೀಡಿ ತಪಾಸಣೆ ನಡೆಸಿದರು.

ಈ ವೇಳೆ ಕಾರ್ತಿಕ್ ಬಾರ್ ಅಂಡ್ ರೆಸ್ಟೋರೆಂಟ್‍ನಲ್ಲಿ, ಲಾಡ್ಜ್‍ನಲ್ಲಿ ತಂಗಿರುವ ಗ್ರಾಹಕರನ್ನು ಹೊರತು ಪಡಿಸಿ, ಹೊರಗಿನ ಗ್ರಾಹಕರಿಗೂ ಮದ್ಯ ಸರಬಾರಾಜು ಮಾಡುವುದು ಕಂಡು ಬಂದಿತು. ಈ ಹಿನ್ನಲೆಯಲ್ಲಿ ಅಬಕಾರಿ ಕಾಯ್ದೆ 1965ರ 36 ಹಾಗೂ 45 ಕಲಂಗಳು ಹಾಗೂ ಅಬಕಾರಿ ನಿಯಮಗಳ ಕಲಂ 3(7)ಬಿ, ಅಬಕಾರಿ ಪರವಾನಿಗೆ ನಿಯಮದ ಕಲಂ 6 ಅಡಿ ಪ್ರಕರಣ ದಾಖಲಿಸಲಾಗಿದೆ.

ಅನಿರೀಕ್ಷತ ತಪಾಸಣೆ ವೇಳೆ ತಹಶೀಲ್ದಾರ್ ಡಾ.ನಾಗವೇಣಿ, ಅಬಕಾರಿ ನಿರೀಕ್ಷಕ ಶೇಕ್ ಇಮ್ರಾನ್, ಉಪತಹಶೀಲ್ದಾರ್ ನಾಗರಾಜ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!