ಚಿತ್ರದುರ್ಗ | ತಾಲ್ಲೂಕಿನ ಈ ಊರುಗಳಲ್ಲಿ ಡಿಸೆಂಬರ್ 09 ರಿಂದ 23 ರವರೆಗೆ ವಿದ್ಯುತ್ ವ್ಯತ್ಯಯ

 

ಚಿತ್ರದುರ್ಗ. ಡಿ.07: ಕೆಪಿಟಿಸಿಎಲ್ ಬೃಹತ್ ಕಾಮಗಾರಿ ವತಿಯಿಂದ 66 ಕೆ.ವಿ ದಾವಣಗೆರೆ-ಚಿತ್ರದುರ್ಗ ಲೈನ್-1ರ ಟ್ಯಾಪ್ ಪಾಯಿಂಟ್‍ನಿಂದ 2.196 ಕಿಮೀ ಉದ್ದಕ್ಕೂ ಭರಮಸಾಗರ ವಿ.ವಿ ಕೇಂದ್ರಕ್ಕೆ 2.196 ಕಿಮೀ ದೂರದ ನಿರ್ಮಾಣಕ್ಕೆ  ಕೊಯೋಟ್ ಕಂಡಕ್ಟರ್‍ನೊಂದಿಗೆ ಜೋಡಿ ಪ್ರಸರಣ ಮಾರ್ಗದ ಮೇಲಿರುವ ಜೋಡಿ ಮಾರ್ಗದಿಂದ ಒಂಟಿ ಪ್ರಸರಣ ಮಾರ್ಗದ ಮೇಲಿರುವ ಒಂಟಿ ಮಾರ್ಗ ಪರಿವರ್ತಿಸುವ ಮೂಲಕ ಅಸ್ತಿತ್ವದಲ್ಲಿರುವ 66/11 ಕೆವಿ ಭರಮಸಾಗರ ವಿ.ವಿ ಕೇಂದ್ರಕ್ಕೆ ಲೀಲೋ ವ್ಯವಸ್ಥೆ  ಒದಗಿಸಲು 1 ಸಂಖ್ಯೆಯ 66 ಕೆವಿ ಟಿ.ಬಿಯನ್ನು 66/11 ಕೆ.ವಿ ಭರಮಸಾಗರ ವಿ.ವಿ ಕೇಂದ್ರದಲ್ಲಿ ನಿರ್ಮಾಣ ಕಾರ್ಯಕ್ಕಾಗಿ ಇದೇ ಡಿ.09 ರಿಂದ 23 ರವರೆಗೆ (ಪರ್ಯಾಯ ದಿನಗಳಂದು ಡಿ.09, 11, 13, 15, 17, 19, 21 ಮತ್ತು ಡಿ.23ರಂದು) ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ  ಭರಮಸಾಗರ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಹೆಗ್ಗೆರೆ, ಎಮ್ಮೆಹಟ್ಟಿ, ನಲ್ಲಿಕಟ್ಟೆ, ಕೋಳಾಳ್ ಎನ್.ಜೆ.ವೈ, ಹೆಗ್ಗಡೆಹಾಳ್,  ವಿಜಾಪುರ, ಶಿವನಕೆರೆ, ನಂದಿಹಳ್ಳಿ,  ಬಹದ್ದೂರ್ ಘಟ್ಟ , ಅಡವಿ ಗೊಲ್ಲರಹಳ್ಳಿ, ಭರಮಸಾಗರ , ಪಮೇರಹಳ್ಳಿ, ಕೋಗುಂಡೆ, ಎಸ್.ಕೆ.ಎಮ್ ಕೈಗಾರಿಕಾ ಪ್ರದೇಶ, ಕೋಡಿಹಳ್ಳಿ, ಅರಳಕಟ್ಟೆ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಡಿ.09 ರಿಂದ 18 ರವರೆಗೆ ವಿದ್ಯುತ್ ವ್ಯತ್ಯಯ :

ಕೆಪಿಟಿಸಿಎಲ್ ಬೃಹತ್ ಕಾಮಗಾರಿ ವತಿಯಿಂದ ಚಿತ್ರದುರ್ಗ 66  ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಪಂಡರಹಳ್ಳಿ ವಿ.ವಿ ಕೇಂದ್ರಕ್ಕೆ ವಿದ್ಯುತ್ ಸರಬರಾಜಾಗುವ ಮಾರ್ಗ-3ರ ವಾಹಕ ಬದಲಾವಣೆ ಮತ್ತು ಗೋಪುರಗಳನ್ನು ನಿರ್ಮಾಣ ಮಾಡುವ ಕಾಮಗಾರಿಗೆ ಪಂಡರಹಳ್ಳಿ, ಚಿತ್ರಹಳ್ಳಿ, ಹೆಚ್.ಡಿ.ಪುರ ಮತ್ತು ಹೊಳಲ್ಕೆರೆ 66/11 ಕೆ.ವಿ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಮಾರ್ಗ ಮುಕ್ತತೆ ತೆಗೆದುಕೊಳ್ಳುವುದರಿಂದ ಇದೇ ಡಿ.9 ರಿಂದ 18 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

 

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಪಂಡರಹಳ್ಳಿ, ಅನ್ನೆಹಾಳು, ಹುಲ್ಲೂರು, ಜಾನುಕೊಂಡ, ಸಿದ್ದಾಪುರ, ಗೋಡಬನಾಳು, ಸೊಂಡೆಕೊಳ, ಸೊಲ್ಲಾಪುರ, ಕುರುಬರಹಳ್ಳಿ, ಬೆಟ್ಟದ ನಾಗೇನಹಳ್ಳಿ, ಹೆಚ್.ಡಿ.ಪುರ, ಟಿ.ನುಲೇನೂರು, ಬೋದಿಪುರ, ತಾಳ್ಯ, ಮತ್ತಿಘಟ್ಟ, ತೆಕಲವಟ್ಟಿ, ಚಿತ್ರಹಳ್ಳಿ, ಬಿ.ಜಿ.ಹಳ್ಳಿ, ಮದ್ದೇರು, ಕೇಶವಪುರ, ಕೊಂಡಾಪುರ, ಹೊಳಲ್ಕೆರೆ, ಚನ್ನಪಟ್ಟಣ, ಹರೇನಹಳ್ಳಿ, ಪುಣಜೂರು, ಎನ್.ಜಿ.ಹಳ್ಳಿ, ಗುಂಡೇರಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

41 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago