Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ತುರುವನೂರು ಹೋಬಳಿಯಲ್ಲಿ ಬಿತ್ತನೆ ಬೀಜ ಖರೀದಿಗೆ ರೈತರ ನಿರುತ್ಸಾಹ…!

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಶ್ರೀಧರ ಡಿ. ರಾಮಚಂದ್ರಪ್ಪ, ತುರುವನೂರು
ಮೊ :  7899789545

ಚಿತ್ರದುರ್ಗ, (ಜೂ.16) : ರಾಜ್ಯದಲ್ಲಿ ಕೆಲವೆಡೆ ಮಳೆಯಾಗುತ್ತಿದ್ದರೂ ಮುಂಗಾರು ಹಂಗಾಮು ನಿರೀಕ್ಷೆಯಂತೆ ಆಗಿಲ್ಲ. ಇನ್ನು ಚಿತ್ರದುರ್ಗ ಜಿಲ್ಲೆಯಲ್ಲೂ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗದ ಕಾರಣ ರೈತರ ಉಳುಮೆ ಪ್ರಮಾಣ ಕೂಡ ಕುಂಠಿತಗೊಂಡಿದೆ.

ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮುಂಗಾರು ಮಳೆ ಪ್ರವೇಶಿಸುವುದು ವಾಡಿಕೆ. ಆದರೆ ಈ ಬಾರಿ ಮಳೆ ಸುರಿಯದಿರುವುದು ರೈತರನ್ನು ಚಿಂತೆಗೆ ದೂಡಿದೆ. ತಾಲ್ಲೂಕಿನ ತುರುವನೂರು ಹೋಬಳಿಯಲ್ಲಿ ಮುಂಗಾರು ಹಂಗಾಮು ಕೈಕೊಟ್ಟಿದ್ದು, ಈ ಭಾಗದ ರೈತ ದಿನ ಬೆಳಗಾದರೆ ಮುಗಿಲಿನತ್ತ ನೋಡುವ ಹಾಗಿದೆ.

ಭೂಮಿ ಹದ : ಮಳೆ ಕೊರತೆಯ ನಡುವೆಯೂ ರೈತರು ಬಿತ್ತನೆಗೆ ಜಮೀನು ಹದಗೊಳಿಸುತ್ತಿದ್ದಾರೆ. ಆದರೆ ಬಿತ್ತನೆಗೆ ಬೇಕಾದ ಬೀಜ-ಗೊಬ್ಬರ ಖರೀದಿಸಲು ಈ ಭಾಗದ ರೈತ ನಿರುತ್ಸಾಹ ತೋರಿದ್ದಾನೆ. ಈ ಹೋಬಳಿಯಲ್ಲಿ ಬಿತ್ತನೆ ಕಾರ್ಯ ಶೇಕಡಾ 25 ರಷ್ಟು ಮಾತ್ರ ಆಗಿದೆ.

ಜೂನ್ ಮಧ್ಯ ಭಾಗ ಎರಡನೇ ವಾರಕ್ಕೆ ಕಾಲಿಟ್ಟಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ಬೀಜ – ಗೊಬ್ಬರ ಕೊಂಡುಕೊಳ್ಳುವುದರಲ್ಲಿ ಹಿಂದೇಟು ಹಾಕುತ್ತಿದ್ದಾರೆ.

ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ 2023-24 ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಬಿತ್ತನೆ ಬೀಜಗಳು ಸಮರ್ಪಕವಾಗಿ ಬಂದಿದ್ದು
ಈ ಭಾಗದ ಬಹುತೇಕ ರೈತರು ಬೆಳೆಯುವ ಶೇಂಗಾ ಸುಮಾರು 585 ಕ್ವಿಂಟಾಲ್ ಸರಬರಾಜಾಗಿದ್ದು, ಇದುವರೆಗೂ (ಜೂನ್ 15ಕ್ಕೆ)  ಕೇವಲ 100 ಕ್ವಿಂಟಾಲ್ ಮಾತ್ರ ರೈತರಿಂದ ಖರೀದಿಸಿದ್ದಾರೆ. ತೊಗರಿ ಬೀಜ 13 ಕ್ವಿಂಟಾಲ್ ದಾಸ್ತಾನು ಬಂದಿದ್ದು, ಖರೀದಿಯಾಗಿಲ್ಲ. ದ್ವಿದಳ ಧಾನ್ಯ ಸೋಯಾಬೀನ್ 30 ಕ್ವಿಂಟಾಲ್ ದಾಸ್ತಾನಿದ್ದು, ಖರೀದಿಯಾಗಿಲ್ಲ.

ಮತ್ತೊಂದು ವಾಣಿಜ್ಯ ಬೆಳೆ ಮೆಕ್ಕೆಜೋಳ ಸುಮಾರು 95 ಕ್ವಿಂಟಾಲ್ ಸರ್ಕಾರದಿಂದ ಬಂದಿದ್ದು,7 ಕ್ವಿಂಟಾಲ್ ಮಾತ್ರ ರೈತರಿಂದ ಖರೀದಿಯಾಗಿದೆ. ಸೂರ್ಯಕಾಂತಿ 26 ಕ್ವಿಂಟಾಲ್ ದಾಸ್ತಾನಿದ್ದು, ಖರೀದಿಯಾಗಿಲ್ಲ. ಮಳೆಯಾಗದ ಹಿನ್ನೆಲೆಯಲ್ಲಿ ರೈತರು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ತುರುವನೂರು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ನಾಗರಾಜ್ ಅವರು ಪ್ರತಿಕ್ರಿಯಿಸಿದ್ದಾರೆ.

ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ದಾಸ್ತಾನಿರುವ ಬಿತ್ತನೆ ಬೀಜಗಳು ರೈತರಿಂದ ಖರೀದಿಯಾಗುವ ಆಶಾಭಾವನೆಯನ್ನು ಕೃಷಿ ಅಧಿಕಾರಿ ನಾಗರಾಜ್ ಸುದ್ದಿಒನ್ ಗೆ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು.. ಏಡ್ಸ್ ತಡೆಗೆ ಸಹಕರಿಸಬೇಕು : ಕಾಂಗ್ರೆಸ್ ಟ್ವೀಟ್..!

ಬೆಂಗಳೂರು: ಆರ್ ಆರ್ ನಗರ ಶಾಸಕ ಮುನಿರತ್ನ ಮಾಡಿಕೊಂಡಿದ್ದ ಪ್ಲ್ಯಾನ್ ಕೇಳಿ ರಾಜ್ಯವೇ ಬೆಚ್ಚಿ ಬಿದ್ದಿದೆ. ಏಡ್ಸ್ ತಡೆಗಾಗಿ ಎಲ್ಲಾ ರಾಜ್ಯಗಳ ಸರ್ಕಾರ ಹೋರಾಟ‌ನಡೆಸುತ್ತಿದ್ದರೆ, ಇಲ್ಲಿ ಮುನಿರತ್ನ ಅವರೇ ಏಡ್ಸ್ ಸೋಂಕು ಹತ್ತಿಸುವ ಹುನ್ನಾರ

ತಿರುಪತಿ ಲಡ್ಡು ವಿವಾದ ಕೇಳಿ ಆಶ್ಚರ್ಯ ಆಯ್ತು : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಸದ್ಯ ದೇಶದೆಲ್ಲೆಡೆ ತಿರುಪತಿ ತಿಮ್ಮಪ್ಪನ ಪ್ರಸಾದ ಲಡ್ಡು ವಿಚಾರವೇ ಸದ್ದು ಮಾಡುತ್ತಿದೆ. ಪ್ರಸಾದಕ್ಕೆ ಪ್ರಾಣಿ ಕೊಬ್ಬನ್ನು ಬಳಕೆ ಮಾಡುತ್ತಾರೆ ಎಂಬ ವಿಚಾರ ಭಕ್ತರ ಭಾವನೆಗೆ ಧಕ್ಕೆ ತಂದಿದೆ. ಇದೀಗ ಈ ಬಗ್ಗೆ ಕೆ.ಎಸ್.ಈಶ್ವರಪ್ಪ

ದಾವಣಗೆರೆ | ಶಾಂತಿ ವಹಿಸಿ ಸೌಹಾರ್ದತೆ ಕಾಪಾಡಿ, ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಜಿ. ಬಿ. ವಿನಯ್ ಕುಮಾರ್ ಒತ್ತಾಯ

    ಸುದ್ದಿಒನ್, ದಾವಣಗೆರೆ, ಸೆಪ್ಟೆಂಬರ್. 20 : ದಾವಣಗೆರೆ ನಗರದ ಜನರು ಶಾಂತಿಪ್ರಿಯರು. ಸಾಮರಸ್ಯದಿಂದ ಜೀವನ ಸಾಗಿಸಬೇಕು. ಯಾವುದೇ ಕಾರಣಕ್ಕೂ ಗಲಭೆ ಮಾಡಬಾರದು. ಪೊಲೀಸರು ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ವಾಭಿಮಾನಿ

error: Content is protected !!