Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಸರ್ಕಾರದಿಂದ ಪ್ರೋತ್ಸಾಹ ಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ.17 : ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮಾತನಾಡಿದರು.

ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಸರ್ಕಾರದಿಂದ ಪ್ರೋತ್ಸಾಹಧನಕ್ಕೆ ಸಂಬಂಧಪಟ್ಟಂತೆ ಯಾವ ಕ್ರಮವಹಿಸಲಾಗಿದೆ ಎಂಬ ಶಾಸಕ ಟಿ.ರಘುಮೂರ್ತಿ ಅವರ ಪ್ರಶ್ನೆಗೆ ಉತ್ತರಿಸಿದ ತೋಟಗಾರಿಕೆ ಉಪನಿರ್ದೇಶಕಿ ಸವಿತಾ ಅವರು,

ಪ್ರಸ್ತುತ ಅಡಿಕೆ ಬೆಳೆಯನ್ನು ಬೆಳೆಯುತ್ತಿರುವ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ  ಮಾತ್ರ ಹನಿ ನೀರಾವರಿ ಘಟಕ ಅಳವಡಿಕೆಗೆ ಸಹಾಯಧನ ನೀಡಲಾಗುತ್ತಿದ್ದು, ಇತರೆ ಪ್ರದೇಶಗಳಲ್ಲಿ ಅಡಿಕೆ ಬೆಳೆಯುವ ರೈತರಿಗೆ ಹನಿ ನೀರಾವರಿ ಅಡಿ ಸಹಾಯಧನ ಪಡೆಯಲು ಮಾರ್ಗಸೂಚಿಯಲ್ಲಿ ಅವಕಾಶ ಕಲ್ಪಿಸಿರುವುದಿಲ್ಲ.

ಹೀಗಾಗಿ ಜಿಲ್ಲೆಯ ಜನಪ್ರತಿನಿಧಿಗಳ ಸೂಚನೆಯಂತೆ, ಜಿಲ್ಲೆಯ ಅಡಿಕೆ ಬೆಳೆಗಾರರಿಗೂ ಸರ್ಕಾರದಿಂದ ಪ್ರೋತ್ಸಾಹಧನ ಲಭ್ಯವಾಗುವಂತಾಗಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.  ಕಳೆದ ನ. 29 ರಂದು ತೋಟಗಾರಿಕೆ ಸಚಿವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಸಚಿವರು ಒಪ್ಪಿಗೆ ನೀಡಿದ್ದಾರೆ.  ಶೀಘ್ರವೇ ಸರ್ಕಾರ ಇದಕ್ಕೆ ಅನುಮೋದನೆ ನೀಡುವ ನಿರೀಕ್ಷೆ ಇದೆ ಎಂದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು, ಹನಿ ನೀರಾವರಿ  ಹಾಗೂ ನರೇಗಾ ಯೋಜನೆಯಡಿ ಸಿಗುವ ಸಹಾಯಧನದಂತೆ ಜಿಲ್ಲೆಯ ಅಡಿಕೆ ಬೆಳೆಗೂ ಒದಗಿಸಬೇಕು ಎಂಬ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಶೀಘ್ರದಲ್ಲಿಯೇ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯಾಗುವ ನಿರೀಕ್ಷೆ ಇದೆ ಎಂದು ಸಭೆಗೆ ತಿಳಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment