Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಮರಣದ ನಂತರ ಕಣ್ಣುಗಳು ಮಣ್ಣಾಗುವ ಬದಲು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಿ – ಎಸ್. ವೀರೇಶ್

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್‌. 09 : ಮರಣದ ನಂತರ ನೇತ್ರಗಳನ್ನು ದಾನ ಮಾಡುವುದಾಗಿ ದಂತ ವೈದ್ಯೆ ಪೂರ್ಣಿಮರವರು ಬಸವೇಶ್ವರ ಪುನರ್ ಜ್ಯೋತಿ ಐ. ಬ್ಯಾಂಕ್‍ಗೆ ಒಪ್ಪಿಗೆ ಪತ್ರ ಕೊಟ್ಟಿರುವುದಕ್ಕೆ ಪ್ರತಿಯಾಗಿ ಐಡಿ. ಕಾರ್ಡ್ ನೀಡಲಾಯಿತು.

 

ಬಸವೇಶ್ವರ ಪುನರ್ ಜ್ಯೋತಿ ಐ. ಬ್ಯಾಂಕ್‍ನ ಅಧ್ಯಕ್ಷರಾದ ಎಸ್.ವೀರೇಶ್ ಡಾ.ಪೂರ್ಣಿಮರವರಿಗೆ ಐ.ಡಿ.ಕಾರ್ಡ್ ವಿತರಿಸಿ ಮಾತನಾಡುತ್ತ ನಿಧನದ ನಂತರ ಕಣ್ಣುಗಳು ಮಣ್ಣಲ್ಲಿ ಮಣ್ಣಾಗುವ ಬದಲು ದಾನ ಮಾಡಿದರೆ ಅಂಧರ ಬಾಳಿಗೆ ಬೆಳಕು ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಡಾ.ಪೂರ್ಣಿಮರವರು ನೇತ್ರ ದಾನಕ್ಕೆ ಒಪ್ಪಿಗೆ ಸೂಚಿಸಿ ಮಾನವೀಯತೆ ಮೆರೆದಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಬಸವೇಶ್ವರ ಪುನರ್ ಜ್ಯೋತಿ ಐ. ಬ್ಯಾಂಕ್‍ನ ಸಂಸ್ಥಾಪಕರಾದ ಗಾಯತ್ರಿ ಶಿವರಾಂ, ಕಾರ್ಯದರ್ಶಿ ಟಿ.ವೀರಭದ್ರಸ್ವಾಮಿ, ಖಜಾಂಚಿ ಎಸ್.ವಿ.ಗುರುಮೂರ್ತಿ, ನಿರ್ದೇಶಕ ಕನಕರಾಜ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now