Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ಎಸ್.ಆರ್.ಎಸ್ ಹೆರಿಟೇಜ್ ಶಾಲೆಯಲ್ಲಿ “ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಯೋಗಾಭ್ಯಾಸ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್.21 : ಯೋಗ ಬಲ್ಲವನಿಗೆ ರೋಗವಿಲ್ಲ”. ‘ಅಹಂ’ ನಿಂದ ‘ಸ್ವಯಂ’ ಕಡೆಗೆ ಹೋಗುವ ಯೋಗ, ವಿಶ್ವದಾದ್ಯಂತ ಪ್ರತಿ ವರ್ಷ ಆಚರಿಸಲಾಗುತ್ತದೆ, ಯೋಗ ಭಾರತದಲ್ಲಿ ಹುಟ್ಟಿದ ಜಾಗತಿಕ ವಿದ್ಯೆ, ಇದು ವಿಶ್ವದಾದ್ಯಂತ ಹರಡಿ ಪ್ರಖ್ಯಾತಿ ಪಡೆದಿದೆ ಎಂದು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ಎಸ್‍ಜೆ  ಹೇಳಿದರು.

ನಗರದ ಎಸ್.ಆರ್.ಎಸ್ ಹೆರಿಟೇಜ್ ಶಾಲೆಯಲ್ಲಿ  “ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆಧ್ಯಾತ್ಮಿಕ ಮತ್ತು ಆರೋಗ್ಯ ಎರಡು ಮುಖದಿಂದಲೂ ತನ್ನನ್ನೂ ನಂಬಿದವರನ್ನೂ ಪೊರೆಯಬಲ್ಲ ಪಾರಂಪರಿಕ ಕಲೆಯಾಗಿ ತನ್ನದೆಯಾದ ವಿಶೇಷ ಗುಣಗಳಿಂದ ಜನರ ಆರೋಗ್ಯ ಕಾಪಾಡುವಲ್ಲಿ ಉತ್ತಮ ಪಾತ್ರವಹಿಸುತ್ತದೆ. ಮನುಷ್ಯನಿಗೆ ಬಾಹ್ಯ ಮತ್ತು ಆಂತರಿಕ ಸೌಂದರ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಅವರು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ. ಎ. ಲಿಂಗಾರೆಡ್ಡಿಯವರು ವಹಿಸಿದ್ದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಯೋಗ ಕ್ರಿಡಾ ಮತ್ತು ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರಾದ ಚಿನ್ಮಯಾನಂದ ಅವರು ಭಾಗವಹಿಸಿ,
ಎಸ್‍ಆರ್‍ಎಸ್‍ ಬೃಹತ್‍ ಅನಂತ ಕೃಷ್ಣ  ಸಭಾಂಗಣದಲ್ಲಿ 1000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದೇ ವೇದಿಕೆಯಲ್ಲಿ  ಸಂಸ್ಕೃತ ಶ್ಲೋಕದೊಂದಿಗೆ ಓಂಕಾರ ಉಚ್ಛಾರಣೆ ಹಾಗೂ ಯೋಗಾಸನಗಳು ಮತ್ತು ಪ್ರಾಣಾಯಾಮ, ಧ್ಯಾನ ಮತ್ತು ಯೋಗದ ನಾನಾ ಭಂಗಿಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗಭ್ಯಾಸ ಮಾಡಿಸಿದರು.

ಅಂತಾರಾಷ್ಟ್ರೀಯ ಯೋಗದಿನವನ್ನು ಒಂದು ಸ್ಮರಣೀಯ ದಿನವನ್ನಾಗಿ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಡಾ. ರವಿ ಟಿ. ಆಡಳಿತಾಧಿಕಾರಿಗಳು, ಶಾಲೆಯ ಪ್ರಾಂಶುಪಾಲರುಗಳಾದ ಶ್ರಿಯುತ ಪ್ರಭಾಕರ್ ಎಮ್ ಎಸ್(ಸಿಬಿಎಸ್‍ಇ) ಹಾಗೂ ಶ್ರೀಮತಿ ಅರ್ಪಿತ ಎಮ್ ಎಸ್ (ಐಸಿಎಸ್‍ಇ) ಮತ್ತು, ಕೋ-ಆರ್ಡಿನೇಟರ್‍ಗಳು ಶಾಲೆಯ ಬೋಧಕ ಮತ್ತು ಬೋಧಕೇತರ ವರ್ಗ ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...