Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಎಸ್.ಆರ್.ಎಸ್ ಹೆರಿಟೇಜ್ ಶಾಲೆಯಲ್ಲಿ “ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಯೋಗಾಭ್ಯಾಸ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್.21 : ಯೋಗ ಬಲ್ಲವನಿಗೆ ರೋಗವಿಲ್ಲ”. ‘ಅಹಂ’ ನಿಂದ ‘ಸ್ವಯಂ’ ಕಡೆಗೆ ಹೋಗುವ ಯೋಗ, ವಿಶ್ವದಾದ್ಯಂತ ಪ್ರತಿ ವರ್ಷ ಆಚರಿಸಲಾಗುತ್ತದೆ, ಯೋಗ ಭಾರತದಲ್ಲಿ ಹುಟ್ಟಿದ ಜಾಗತಿಕ ವಿದ್ಯೆ, ಇದು ವಿಶ್ವದಾದ್ಯಂತ ಹರಡಿ ಪ್ರಖ್ಯಾತಿ ಪಡೆದಿದೆ ಎಂದು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ಎಸ್‍ಜೆ  ಹೇಳಿದರು.

ನಗರದ ಎಸ್.ಆರ್.ಎಸ್ ಹೆರಿಟೇಜ್ ಶಾಲೆಯಲ್ಲಿ  “ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆಧ್ಯಾತ್ಮಿಕ ಮತ್ತು ಆರೋಗ್ಯ ಎರಡು ಮುಖದಿಂದಲೂ ತನ್ನನ್ನೂ ನಂಬಿದವರನ್ನೂ ಪೊರೆಯಬಲ್ಲ ಪಾರಂಪರಿಕ ಕಲೆಯಾಗಿ ತನ್ನದೆಯಾದ ವಿಶೇಷ ಗುಣಗಳಿಂದ ಜನರ ಆರೋಗ್ಯ ಕಾಪಾಡುವಲ್ಲಿ ಉತ್ತಮ ಪಾತ್ರವಹಿಸುತ್ತದೆ. ಮನುಷ್ಯನಿಗೆ ಬಾಹ್ಯ ಮತ್ತು ಆಂತರಿಕ ಸೌಂದರ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಅವರು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ. ಎ. ಲಿಂಗಾರೆಡ್ಡಿಯವರು ವಹಿಸಿದ್ದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಯೋಗ ಕ್ರಿಡಾ ಮತ್ತು ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರಾದ ಚಿನ್ಮಯಾನಂದ ಅವರು ಭಾಗವಹಿಸಿ,
ಎಸ್‍ಆರ್‍ಎಸ್‍ ಬೃಹತ್‍ ಅನಂತ ಕೃಷ್ಣ  ಸಭಾಂಗಣದಲ್ಲಿ 1000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದೇ ವೇದಿಕೆಯಲ್ಲಿ  ಸಂಸ್ಕೃತ ಶ್ಲೋಕದೊಂದಿಗೆ ಓಂಕಾರ ಉಚ್ಛಾರಣೆ ಹಾಗೂ ಯೋಗಾಸನಗಳು ಮತ್ತು ಪ್ರಾಣಾಯಾಮ, ಧ್ಯಾನ ಮತ್ತು ಯೋಗದ ನಾನಾ ಭಂಗಿಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗಭ್ಯಾಸ ಮಾಡಿಸಿದರು.

ಅಂತಾರಾಷ್ಟ್ರೀಯ ಯೋಗದಿನವನ್ನು ಒಂದು ಸ್ಮರಣೀಯ ದಿನವನ್ನಾಗಿ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಡಾ. ರವಿ ಟಿ. ಆಡಳಿತಾಧಿಕಾರಿಗಳು, ಶಾಲೆಯ ಪ್ರಾಂಶುಪಾಲರುಗಳಾದ ಶ್ರಿಯುತ ಪ್ರಭಾಕರ್ ಎಮ್ ಎಸ್(ಸಿಬಿಎಸ್‍ಇ) ಹಾಗೂ ಶ್ರೀಮತಿ ಅರ್ಪಿತ ಎಮ್ ಎಸ್ (ಐಸಿಎಸ್‍ಇ) ಮತ್ತು, ಕೋ-ಆರ್ಡಿನೇಟರ್‍ಗಳು ಶಾಲೆಯ ಬೋಧಕ ಮತ್ತು ಬೋಧಕೇತರ ವರ್ಗ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment