ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28 : ನಗರದ ವಿದ್ಯಾ ನಗರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷರಾದ ಜೆ. ಪರಶುರಾಮ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿದ್ಯಾನಗರ ಕ್ಷೇಮಭಿವೃದ್ಧಿ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ 2009 ರಿಂದ 6 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ನಂತರ ಅವರು ಗೌರವ ಅಧ್ಯಕ್ಷರಾಗಿ 2026 ರವರೆಗೂ ಸೇವೆ ಸಲ್ಲಿಸಿರುತ್ತಾರೆ. ಸುಮಾರು 17 ವರ್ಷಗಳ ಕಾಲ ಸಂಘದ ಅಧ್ಯಕ್ಷರಾಗಿ ಮತ್ತು ಗೌರವ ಅಧ್ಯಕ್ಷರಾಗಿ ಸಾಕಷ್ಟು ವಿದ್ಯಾನಗರದ ಅಭಿವೃದ್ಧಿಗಾಗಿ ಸಾಕಷ್ಟು ಕೆಲಸ ಸೇವೆ ಸಲ್ಲಿಸಿದ್ದಾರೆ. ಇಂದು ಸಂಜೆ(ಮಾರ್ಚ್. 28 ರಂದು) ರಾಜೀನಾಮೆ ನೀಡಿದ್ದಾರೆ. ಇಲ್ಲಿಯವರೆಗೂ ಸಹಕರಿಸ ವಿದ್ಯಾನಗರದ ಸೇವಾ ಅಭಿವೃದ್ಧಿ ಸಂಘದ ಸದಸ್ಯರಿಗೂ ಮತ್ತು ಎಲ್ಲಾ ನಾಗರೀಕರಿಗೂ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
















