ಸುದ್ದಿಒನ್, ಚಿತ್ರದುರ್ಗ ಮಾ. 26 : ನಗರದ ಆನೆ ಬಾಗಿಲ ಬಳಿಯಲ್ಲಿನ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಕೆ.ವಿ. ನಾಗಭೂಷಣ ಶೆಟ್ಟಿಯವರ ಧರ್ಮಪತ್ನಿ ಶ್ರೀಮತಿ ಕೆ.ಎನ್.ಜಗದಾಂಬ (91 ವರ್ಷ) ಇಂದು ಬೆಳಿಗ್ಗೆ 11 ಗಂಟೆಗೆ ಆನಾರೋಗ್ಯದಿಂದ ವಿದ್ಯಾನಗರ ದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಮೃತರು ಪತಿ, ನಾಲ್ವರು ಪುತ್ರಿಯರು , ಇಬ್ಬರು ಪುತ್ರರು ಸೇರಿದಂತೆ ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರವಾದ ಬಂಧು ಬಳಗವನ್ನು ಆಗಲಿದ್ದಾರೆ, ಮೃತರ ಅಂತ್ಯಕ್ರಿಯೆ ನಾಳೆ (ಮಾ.27ರ ಶುಕ್ರವಾರ) ಬೆಳಿಗ್ಗೆ 10 ಗಂಟೆಗೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
















