ಸುದ್ದಿಒನ್, ಚಿತ್ರದುರ್ಗ, ಮೇ. 21 : ಹಿರಿಯೂರು ತಾಲ್ಲೂಕು ಯರಬಳ್ಳಿ ಗ್ರಾಮದ ನಿವಾಸಿ ಹಾಗೂ ಬೆಂಗಳೂರಿನಲ್ಲಿ ವಿವಿಧ ಪತ್ರಿಕೆಗಳಿಗೆ ಪುಟ ವಿನ್ಯಾಸಕರಾಗಿದ್ದ ರಂಗನಾಥ್ (46) ಗುರುವಾರ ಬೆಂಗಳೂರಿನಲ್ಲಿ ಬೆಳಗಿನ ಜಾವ 3 ಗಂಟೆಗೆ ನಿಧನ ಹೊಂದಿದರು.
ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಓರ್ವ ಪುತ್ರಿ, ಓರ್ವ ಪುತ್ರ, ಪತ್ನಿ ಇದ್ದಾರೆ. ಪಿಣ್ಯದಲ್ಲಿ ಇಂದು (ಮೇ. 21, ಗುರುವಾರ) ಮಧ್ಯಾನ್ಹ 12 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಿತು. ಸ್ನೇಹಿತರು, ಕುಟುಂಬಸ್ಥರು, ಪತ್ರಕರ್ತರು ಅಂತಿಮ ನಮನ ಸಲ್ಲಿಸಿದರು. ವಿಜಯವಾಣಿ, ಕನ್ನಡಪ್ರಭ, ವಿಶ್ವವಾಣಿ ಹೀಗೆ ಅನೇಕ ಪತ್ರಿಕೆಗಳಲ್ಲಿ ವಿಶೇಷ ಪುಟ ವಿನ್ಯಾಸನಾಗಿ ಕಾರ್ಯನಿರ್ವಹಿಸಿದ್ದರು. ವಿಜಯವಾಣಿ ಪತ್ರಿಕೆ ಚಿತ್ರದುರ್ಗ-ದಾವಣಗೆರೆ ಬ್ಯರೋದಲ್ಲಿ ಕೆಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಬಳಿಕ ಬೆಂಗಳೂರಿಗೆ ತೆರಳಿ ವಿಶ್ವವಾಣಿ ಪತ್ರಿಕೆಯಲ್ಲಿ ಮುಖಪುಟ, ವಿಶೇಷ ಪುಟಗಳ ವಿನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಸುಧೀರ್ಘ 20 ವರ್ಷದ ಸೇವಾವಧಿಯಲ್ಲಿ ಅನೇಕ ಯುವಪೀಳಿಗೆ ಪುಟ ವಿನ್ಯಾಸದ ಕುರಿತು ತರಬೇತಿ ನೀಡಿದ್ದರು. ಜೊತೆಗೆ ಕೆಲಕಾಲ ಪತ್ರಕರ್ತರಾಗಿದ್ದರು. ರಂಗನಾಥ್ ನಿಧಕ್ಕೆ ಪತ್ರಕರ್ತರು, ಸಂಪಾದಕರು, ಸ್ನೇಹಿತ ವರ್ಗದವರು ಕಂಬನಿ ಮಿಡಿದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















