Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಸಡಗರ ಸಂಭ್ರಮದಿಂದ ನಡೆದ ಕಣಿವೆ ಆಂಜನೇಯ ಸ್ವಾಮಿ ಕಾರ್ತಿಕ ಮಹೋತ್ಸವ

---Advertisement---

ಚಿತ್ರದುರ್ಗ : ಚಿತ್ರದುರ್ಗ ಹೊರವಲಯದ ಉಪಾಧ್ಯ ಹೋಟೆಲ್ ಪಕ್ಕದಲ್ಲಿರುವ ಕಣಿವೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಂಭ್ರಮ ಸಡಗರದಿಂದ ಸಾವಿರಾರು ಭಕ್ತರೊಂದಿಗೆ ಶ್ರೀ ಕಣಿವೆ ಆಂಜನೇಯ ಸ್ವಾಮಿ ಮತ್ತು ಶ್ರೀ ಸುಬ್ರಹ್ಮಣ್ಯ ಸ್ವಾಮಿಯ 27 ನೇ ವರ್ಷದ ಕಾರ್ತಿಕ ಮಹೋತ್ಸವ ನಡೆಯಿತು.

ಶ್ರೀ ಕಣಿವೆ ಆಂಜನೇಯಸ್ವಾಮಿಗೆ ಬೆಳಿಗ್ಗೆ ವಿಶೇಷ ಅಲಂಕಾರ ಮಾಡಿದ್ದು ಭಕ್ತರ ಕಣ್ಮನ ಸೆಳೆಯಿತು. ವಿವಿಧ ಹೂ ಹಣ್ಣುಗಳ ಮೂಲಕ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದ ಸಾವಿರಾರು ಸಂಖ್ಯೆಯಲ್ಲಿ ಸರದಿ ಸಾಲಿನಲ್ಲಿ ನಿಂತು ಸ್ವಾಮಿ ದರ್ಶನ, ಆಶೀರ್ವಾದ ಪಡೆದು ಸಾಗುತ್ತಿದ್ದರು. ಮಹಾಮಂಗಳಾರತಿ ಮತ್ತು ಸೀತಾ ರಾಮರ ಪಲ್ಲಕ್ಕಿ ದಾರಿ ಉದ್ದಕ್ಕೂ ದೀಪಗಳ ಹಚ್ಚಿದ್ದರು. ಬೆಳಗ್ಗೆಯಿಂದ ಭಜನೆ ಸಹ ನಡೆಯಿತು.

ಭಕ್ತರಿಗೆ ಪ್ರಸಾದ ವಿನಿಯೋಗ 
ಆಂಜನೇಯ ಸ್ವಾಮಿ ಕಾರ್ತಿಕ ಮಹೋತ್ಸವಕ್ಕೆ ಬೆಳಗ್ಗೆ 9 ರಿಂದ ಲಾಡು, ಪಾಯಿಸ, ಪಲ್ಯ, ಅನ್ನ ಸಂಬಾರು ಪ್ರಸಾದ ನೀಡಿದರು. ಜಾತ್ರೆಯಂತೆ ಹರಿದು ಬಂದ ಭಕ್ತರಿಗೆ ಸಾಲಿನಲ್ಲಿ ಪ್ರಸಾದ ವಿತರಿಸಿದರು. ಸುಮಾರು 15 ಸಾವಿರಕ್ಕೂ ಹೆಚ್ಚು ಭಕ್ತರು ಕಾರ್ತಿಕ ಮಹೋತ್ಸವಕ್ಕೆ ಆಗಮಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...