Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ : ನಗರಸಭೆ ಪೌರಾಯುಕ್ತರಾಗಿ ಕಾಂತರಾಜ್,  ಚಳ್ಳಕೆರೆ ತಹಶೀಲ್ದಾರರಾಗಿ ರೇಹಾನ್ ಪಾಷಾ ನೇಮಕ

---Advertisement---

ಚಿತ್ರದುರ್ಗ, (ಜ.31) : ಚಿತ್ರದುರ್ಗ ನಗರಸಭೆಯ ಪೌರಾಯುಕ್ತರಾಗಿ ಕಾಂತರಾಜ್ ಹೆಚ್, ಮತ್ತು ಚಳ್ಳಕೆರೆ ತಹಶೀಲ್ದಾರರಾಗಿ ರೇಹಾನ್ ಪಾಷಾ ಅವರನ್ನು ನೇಮಕ ಮಾಡಿ ನಗರಾಭಿವೃದ್ಧಿ ಇಲಾಖೆಯ ಮತ್ತು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಖಾಲಿಯಿದ್ದ ಚಿತ್ರದುರ್ಗ ನಗರಸಭೆ ಪೌರಾಯುಕ್ತ ಹುದ್ದೆಗೆ ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹೆಚ್. ಕಾಂತರಾಜು ಅವರನ್ನು ಸರ್ಕಾರ ನೇಮಿಸಿದೆ.

ಜೆ.ಟಿ. ಹನುಮಂತ ರಾಜು ಅವರು ಕಳೆದ ನವೆಂಬರ್ ತಿಂಗಳಲ್ಲಿ ನಿಧನರಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಚಿತ್ರದುರ್ಗ ನಗರಸಭೆಯ ಪೌರಾಯುಕ್ತ ಹುದ್ದೆ ಖಾಲಿಯಿತ್ತು.

ಚಳ್ಳಕೆರೆ ತಹಶೀಲ್ದಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್. ರಘುಮೂರ್ತಿ ಅವರ ಸ್ಥಾನಕ್ಕೆ ಬಳ್ಳಾರಿ ಜಿಲ್ಲೆಯ ಪುರಸಭಾ ತಹಶೀಲ್ದಾರ್ ಉಪ ವಿಭಾಗಧಿಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರೇಹಾನ್ ಪಾಷಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...