Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಪಿ.ಡಿ.ಓ.ಗಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪ್ರತಿಭಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.24 : ಬೆಳೆ ಸಮೀಕ್ಷಾ ವರದಿಯನ್ನು ತಯಾರಿಸುವಲ್ಲಿ ನೀರಾವರಿ ಪ್ರದೇಶಗಳನ್ನು ಆಯ್ಕೆ ಮಾಡಿಕೊಂಡಿರುವ ದೊಡ್ಡಸಿದ್ದವ್ವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪಿ.ಡಿ.ಓ.ಗಳು ವಿಮಾ ಕಂಪನಿಗಳಿಗೆ ಕಳಿಸಿ ಬೇಜವಾಬ್ದಾರಿತನ ತೋರಿರುವುದರ ವಿರುದ್ದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಕಚೇರಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ನೀರಾವರಿ ಪ್ರದೇಶಗಳಲ್ಲಿ ಬೆಳೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿರುವ ಪಿ.ಡಿ.ಓ.ಗಳು ಮಳೆಯಾಶ್ರಿತ ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿರುವ ಮಾಹಿತಿಯನ್ನು ವಿಮಾ ಕಂಪನಿಗಳಿಗೆ ಕಳಿಸಿದ್ದರೆ ರೈತರಿಗೆ ಪರಿಹಾರ ಸಿಗುತ್ತಿತ್ತು. ಸಿಟು+೫೦ ಬೆಲೆ ನೀತಿಯ ಕೆಳಗೆ ಬೆಲೆ ಭದ್ರತೆ ಕಾಯ್ದೆ ಜಾರಿಗೊಳಿಸುವವರೆಗೂ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವಯಂ ವೆಚ್ಚ ಯೋಜನೆಯನ್ನು ಸರ್ಕಾರ ಹಿಂದಕ್ಕೆ ಪಡೆಯಬೇಕು. ಮತ್ತು ಆರ್.ಆರ್.ನಂಬರ್‌ಗಳಿಗೆ ಆಧಾರ್ ನಂಬರ್ ಜೋಡಣೆ ಮಾಡುವಂತೆ ಹೊರಡಿಸಿರುವ ಆದೇಶವನ್ನು ಹಿಂದಕ್ಕೆ ಪಡೆಯಬೇಕೆಂದು ಪ್ರತಿಭಟನಾನಿರತ ರೈತರು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಕಾಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ ರೈತರ ಕೃಷಿಗೆ ಬಹುಮುಖ್ಯವಾಗಿ ಬೇಕಾಗಿರುವ ನೀರು ಹಾಗೂ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಿದರೆ ಎಲ್ಲಾ ಸಬ್ಸಿಡಿಗಳನ್ನು ಕೈಬಿಡುತ್ತೇವೆ. ಎಲ್ಲಿಯವರೆಗೂ ಈ ಸೌಕರ್ಯಗಳನ್ನು ಒದಗಿಸುವುದಿಲ್ಲವೋ ಅಲ್ಲಿಯತನಕ ಆರ್.ಆರ್.ನಂಬರ್‌ಗೆ ಆಧಾರ್ ಜೋಡಣೆ ಮಾಡುವುದಿಲ್ಲವೆಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆ ವೈದ್ಯರುಗಳ ಮೇಲೆ ಹಲ್ಲೆ ಮಾಡಿದವರಿಗೆ ಮೂರು ವರ್ಷ ಜೈಲು, ಐವತ್ತು ಸಾವಿರ ರೂ.ಗಳ ದಂಡ ವಿಧಿಸುವುದಾಗಿ ಶಾಸಕಾಂಗ ಸಭೆಯಲ್ಲಿ ಸಚಿವ ಸಂಪುಟ ತೀರ್ಮಾನಿಸಿದ್ದು, ಸದ್ಯದಲ್ಲಿಯೇ ಕಾಯ್ದೆ ಜಾರಿಯಾಗಲಿದೆ. ಆರೋಗ್ಯ ಸಿಬ್ಬಂದಿಗಳು ಎಷ್ಟು ಪರಿಣಿತರು ಎನ್ನುವುದನ್ನು ಪ್ರತಿ ವರ್ಷವೂ ತಪಾಸಣೆ ನಡೆಸಬೇಕು. ಕಾಪಿ ಹೊಡೆದು ಲಂಚ ಕೊಟ್ಟು ಸರ್ಟಿಫಿಕೇಟ್‌ಗಳನ್ನು ಪಡೆದುಕೊಂಡಿರುವ ಸಾಕಷ್ಟು ವೈದ್ಯರುಗಳು ಈಗಲೂ ಇರುವುದರಿಂದ ಆಸ್ಪತ್ರೆಗೆ ಬರುವ ಬಡ ರೋಗಿಗಳು ಈಗಲೂ ಉಳಿಸಿಕೊಳ್ಳಲು ಆಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಕೇಳಿದಷ್ಟು ಹಣ ಕೊಟ್ಟು ಬರೆದುಕೊಟ್ಟಂತ ಔಷಧಿಗಳನ್ನೆಲ್ಲಾ ತಂದರೂ ಕೊನೆಗೆ ಹೆಣ ಹಾಕಿಕೊಂಡು ಮನೆಗೆ ಹೋಗುವ ಹೀನ ಪರಿಸ್ಥಿತಿ ನಿರ್ಮಾಣವಾಗಿದೆ. ಅಂತಹ ಸಂದರ್ಭಗಳಲ್ಲಿ ವೈದ್ಯರುಗಳ ಮೇಲೆ ಹಲ್ಲೆ ಮಾಡದೇ ಇರುತ್ತಾರೆಯೇ ಎಂದು ಖಾರವಾಗಿ ಈಚಘಟ್ಟದ ಸಿದ್ದವೀರಪ್ಪ ಪ್ರಶ್ನಿಸಿದರು?

ಸರ್ಕಾರದ ನಿಯಮಗಳನ್ನು ಮೀರಿ ಖಾಸಗಿ ಶಾಲೆಗಳಲ್ಲಿ ಮಕ್ಕಳಿಂದ ಡೊನೇಷನ್ ಪಡೆಯಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಎಷ್ಟು ಶುಲ್ಕವಿದೆಯೋ ಅಷ್ಠೆ ಶುಲ್ಕವನ್ನು ಪಡೆದು ಶಿಕ್ಷಣ ನೀಡಬೇಕು. ಈ ಸಂಬAಧ ಜಿಲ್ಲಾಧಿಕಾರಿ ಜೊತೆ ಹಲವಾರು ಸಭೆ ನಡೆಸಿದ್ದೇವೆ. ಆದರೂ ಖಾಸಗಿ ಶಾಲೆಯವರು ಪೋಷಕರುಗಳಿಂದ ಹಣ ಸುಲಿಗೆ ಮಾಡುತ್ತಿರುವುದು ಇನ್ನು ನಿಂತಿಲ್ಲ ಎಂದು ಆಪಾದಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿ ಆರ್.ಬಿ.ನಿಜಲಿಂಗಪ್ಪ, ಹನುಮಂತರೆಡ್ಡಿ
ಚAದ್ರಮೌಳಿ, ಎಂ.ಟಿ.ಸತೀಶ್‌ರೆಡ್ಡಿ, ಎಂ.ಬಸವರಾಜಪ್ಪ, ತಿಮ್ಮಾರೆಡ್ಡಿ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!