Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪಿಳ್ಳೆಕೆರೇನಹಳ್ಳಿಯಲ್ಲಿ ಕಾರ್ತಿಕ ದೀಪೋತ್ಸವ ಸಂಭ್ರಮ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 26 : ನಗರದ ಹೊರವಲಯದ ಪಿಳ್ಳೇಕೆರೆನಹಳ್ಳಿ ಗ್ರಾಮದ ಶಕ್ತಿ ದೇವತೆಯಾದ ಶ್ರೀ ಶ್ರೀ ಶ್ರೀ ಗೌರಸಮುದ್ರದೇವಿಯ ಸನ್ನಿಧಿಯಲ್ಲಿ ದೇವಿಯ 14 ನೇ ವರ್ಷದ ಕಾರ್ತಿಕ ಮಹೋತ್ಸವ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.

ಕಾರ್ತಿಕ ಮಹೋತ್ಸವದ ಅಂಗವಾಗಿ ದೇವಿಗೆ
ಮಹಾಪಂಚಾಮೃತಾಭಿಶೇಕ, ಮಹಾಮಂಗಳರಾತಿ,
ಗಂಗೆ ಪೂಜೆ, ತದನಂತರ ಗ್ರಾಮದ ದೇವಸ್ಥಾನಗಳಿಗೆ ಕುಂಭಮೇಳದೊಂದಿಗೆ ಹರಿಶಿಣ, ಕುಂಕುಮ, ಅಕ್ಷತೆ ಸಮರ್ಪಣೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಸಂಜೆ ನಡೆದ ಅದ್ದೂರಿ ದೀಪೋತ್ಸವದಲ್ಲಿ ಭಕ್ತರು ದೀಪ ಬೆಳಗಿಸಿ ಭಕ್ತಿ ಸಮರ್ಪಿಸಿದರು.

ಬಸವೇಶ್ವರ ನಗರ, ಬಾಪೂಜಿ ನಗರ, ವಿದ್ಯಾನಗರ, ಜೆಸಿಆರ್ ಬಡಾವಣೆ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ದೇವರಿಗೆ ಪೂಜೆ ಸಲ್ಲಿಸಿದರು. ಬೆಳಗ್ಗೆಯಿಂದ ರಾತ್ರಿವರೆಗೂ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಕೃಪೆಗೆ ಪಾತ್ರರಾದರು. ಸಂಜೆ 7 ಗಂಟೆಗೆ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು.

ವರ್ಷದಿಂದ ವರ್ಷಕ್ಕೆ ಸುತ್ತಮುತ್ತಲಿನ ಬಡಾವಣೆಗಳ, ಗ್ರಾಮಗಳ ಭಕ್ತರು ನೀಡುವ ದೇಣಿಗೆಯಿಂದ ಕಾರ್ತಿಕ ಮಹೋತ್ಸವ, ವಿಶೇಷ ಪೂಜೆ ಹಾಗೂ ದಾಸೋಹ ನಡೆಸುವುದು ವಿಶೇಷ. ವರ್ಷದಿಂದ ವರ್ಷಕ್ಕೆ ಈ ಕಾರ್ಯಕ್ರಮ ಹೆಚ್ಚು ಮೆರುಗು ಪಡೆದುಕೊಳ್ಳುತ್ತಿರುವುದು ಗಮನಾರ್ಹ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...