Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಹಿಂದಿ ದಿವಸ್ ಹೇರಿಕೆ ವಿರೋಧಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ಅಂತರಾಷ್ಟ್ರೀಯ ಹಿಂದಿ ದಿವಸ್ ಆಚರಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ಪ್ರಧಾನ ಅಂಚೆ ಕಚೇರಿ ಮುಂಭಾಗ ಕರುನಾಡ ವಿಜಯಸೇನೆ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿ ಪೋಸ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಕನ್ನಡಕ್ಕೆ 2700 ವರ್ಷಗಳ ಸುದೀರ್ಘ ಇತಿಹಾಸವಿದ್ದರೂ ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಹೇರಿಕೆ ಮಾಡುತ್ತಿದೆ. ಪ್ರಾದೇಶಿಕ ಭಾಷೆಗಳ ಇತಿಹಾಸದಲ್ಲಿಯೇ ಅತಿ ಹಳೆಯದಾದ ಕನ್ನಡ ಭಾಷೆಗೆ ಅಂತರಾಷ್ಟ್ರೀಯ ಭಾಷೆಯ ಸ್ಥಾನಮಾನ ನೀಡಬೇಕು. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಎಲ್ಲಾ ಪಕ್ಷಗಳು ಕನ್ನಡವನ್ನು ಕಡೆಗಣಿಸುತ್ತ ಬರುತ್ತಿರುವುದನ್ನು ವಿರೋಧಿಸಿ ಅನೇಕ ವರ್ಷಗಳಿಂದಲೂ ಕರುನಾಡ ವಿಜಯಸೇನೆ ಹೋರಾಟ ಮಾಡಿಕೊಂಡು ಬರುತ್ತಿದೆ. ಪ್ರತಿ ವರ್ಷ ಸೆ.14 ರಂದು ಹಿಂದಿ ದಿವಸ್ ಆಚರಿಸುತ್ತಿರುವ ಕೇಂದ್ರ ಸರ್ಕಾರ ಕನ್ನಡ ಭಾಷಾ ದಿನವೆಂದು ಆಚರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಉಪಾಧ್ಯಕ್ಷೆ ರತ್ನಮ್ಮ,
ಕಾರ್ಯದರ್ಶಿ ಜಗದೀಶ್ ಸಿ. ಉಪಾಧ್ಯಕ್ಷ ಮುಜಾಯಿದ್, ನಗರಾಧ್ಯಕ್ಷ ಅವಿನಾಶ್, ನಾಗೇಶ್, ಯರ್ರಿಸ್ವಾಮಿ, ಕಮಲ, ನಾಗರಾಜ್ ಮುತ್ತು, ಹರೀಶ್‍ಕುಮಾರ್ ಪಿ.ಆರ್.
ಮಧುಸೂದನ್, ಪಾಂಡು, ಅಖಿಲೇಶ್ ಪ್ರತಿಭಟನೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment