ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ಅಂತರಾಷ್ಟ್ರೀಯ ಹಿಂದಿ ದಿವಸ್ ಆಚರಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ಪ್ರಧಾನ ಅಂಚೆ ಕಚೇರಿ ಮುಂಭಾಗ ಕರುನಾಡ ವಿಜಯಸೇನೆ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿ ಪೋಸ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಕನ್ನಡಕ್ಕೆ 2700 ವರ್ಷಗಳ ಸುದೀರ್ಘ ಇತಿಹಾಸವಿದ್ದರೂ ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಹೇರಿಕೆ ಮಾಡುತ್ತಿದೆ. ಪ್ರಾದೇಶಿಕ ಭಾಷೆಗಳ ಇತಿಹಾಸದಲ್ಲಿಯೇ ಅತಿ ಹಳೆಯದಾದ ಕನ್ನಡ ಭಾಷೆಗೆ ಅಂತರಾಷ್ಟ್ರೀಯ ಭಾಷೆಯ ಸ್ಥಾನಮಾನ ನೀಡಬೇಕು. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಎಲ್ಲಾ ಪಕ್ಷಗಳು ಕನ್ನಡವನ್ನು ಕಡೆಗಣಿಸುತ್ತ ಬರುತ್ತಿರುವುದನ್ನು ವಿರೋಧಿಸಿ ಅನೇಕ ವರ್ಷಗಳಿಂದಲೂ ಕರುನಾಡ ವಿಜಯಸೇನೆ ಹೋರಾಟ ಮಾಡಿಕೊಂಡು ಬರುತ್ತಿದೆ. ಪ್ರತಿ ವರ್ಷ ಸೆ.14 ರಂದು ಹಿಂದಿ ದಿವಸ್ ಆಚರಿಸುತ್ತಿರುವ ಕೇಂದ್ರ ಸರ್ಕಾರ ಕನ್ನಡ ಭಾಷಾ ದಿನವೆಂದು ಆಚರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಉಪಾಧ್ಯಕ್ಷೆ ರತ್ನಮ್ಮ,
ಕಾರ್ಯದರ್ಶಿ ಜಗದೀಶ್ ಸಿ. ಉಪಾಧ್ಯಕ್ಷ ಮುಜಾಯಿದ್, ನಗರಾಧ್ಯಕ್ಷ ಅವಿನಾಶ್, ನಾಗೇಶ್, ಯರ್ರಿಸ್ವಾಮಿ, ಕಮಲ, ನಾಗರಾಜ್ ಮುತ್ತು, ಹರೀಶ್ಕುಮಾರ್ ಪಿ.ಆರ್.
ಮಧುಸೂದನ್, ಪಾಂಡು, ಅಖಿಲೇಶ್ ಪ್ರತಿಭಟನೆಯಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.




















