ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 05 : ದೊಡ್ಡಪೇಟೆಯ ಕೆಂಚನಾರಹಟ್ಟಿಯಲ್ಲಿರುವ ಕಾಟಲಿಂಗೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ ಕಾಳುಹಬ್ಬ ಬುಧವಾರ ಸಂಪನ್ನಗೊಂಡಿತು.
ಮೂರದಿಂದ ಆರಂಭಗೊಂಡ ಜಾತ್ರಾ ಮಹೋತ್ಸವದಲ್ಲಿ ಗಂಗಾಪೂಜೆ, ರುದ್ರಾಭಿಷೇಕ, ಮಹಾ ಮಂಗಳಾರತಿಯೊಂದಿಗೆ ಪೂಜೆ ಸಲ್ಲಿಸಿ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ರಾಶಿ ಪೂಜೆ, ಮಣೇವು ಸೇವೆ, ದೊಡ್ಡ ಎಡೆ ಪೂಜೆ ನೈವೇದ್ಯ ಜಾತ್ರಾ ಮಹೋತ್ಸವದ ವಿಶೇಷವಾಗಿತ್ತೆಂದು ಕಾಟಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಡಿ.ಮೈಲಾರಪ್ಪ ತಿಳಿಸಿದ್ದಾರೆ.















