ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 15 : ನಗರದ ತರಳಬಾಳು ನಗರದ ವಾಸಿ ಹಾಗೂ ನಿವೃತ್ತ ಎಲೆಕ್ಟ್ರಿಕಲ್ ಎಂಜಿನಿಯರ್ ಎಸ್.ಎಸ್. ಕೇಶವ ರೆಡ್ಡಿ (83 ವರ್ಷ) ಇಂದು ಬೆಳಿಗ್ಗೆ ನಿಧನರಾದರು. ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನಾಳೆ (ಗುರುವಾರ, ಏಪ್ರಿಲ್.16) ಬೆಳಿಗ್ಗೆ 9 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.






