Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕೆಪಿಸಿಸಿ ಕಾರ್ಯಧ್ಯಕ್ಷ ಬಿಎನ್ ಚಂದ್ರಪ್ಪರನ್ನು ತರಾಟೆಗೆ ತೆಗೆದುಕೊಂಡ ರೈತರು

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜನವರಿ.23 : ಕೆಪಿಸಿಸಿ ಕಾರ್ಯಧ್ಯಕ್ಷ ಬಿ.ಎನ್ ಚಂದ್ರಪ್ಪರನ್ನು ರೈತರು ತರಾಟಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.

ನಗರದಲ್ಲಿಂದು ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಕಾರ್ಯಾನುಷ್ಟಾನಕ್ಕೆ ಆಗ್ರಹಿಸಿ ಬಂದ್ ಗೆ ಕರೆ ನೀಡಲಾಗಿತ್ತು . ರೈತ ಸಂಘಟನೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ  ಚಿತ್ರದುರ್ಗ ಮಾಜಿ ಸಂಸದ ಬಿ.ಎನ್ ಚಂದ್ರಪ್ಪ ಅವರು ಆಗಮಿಸಿ ಭಾಷಣ ಮಾಡುತ್ತಿದ್ದಾಗ ರೈತರು ಬಿ.ಎನ್ ಚಂದ್ರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನೀವು ಸಂಸದರಾಗಿದ್ದಾಗ ಯಾಕೆ ಭದ್ರಾ ಮೇಲ್ದಂಡೆ ಯೋಜನೆಗೆ ಕಾಮಗಾರಿ ವೇಗ ಮಾಡಲಿಲ್ಲ ಹತ್ತು ವರ್ಷಗಳಿಂದ ಇದನ್ನೇ ಹೇಳಿಕೊಂಡು ಬಂದಿದ್ದೀರಾ ?.ಹೋದ ಸಾರಿ ಹೈಸ್ಕೂಲ್ ಮೈದಾನದಲ್ಲಿ ಇದೇ ತರ ಆಶ್ವಾಸನೆ ನೀಡಿದ್ದಿರಿ. ಆಗ ಯೋಜನೆ ಬಗ್ಗೆ ಗಮನ ಹರಿಸದ ನೀವು ಈಗ ಚುನಾವಣೆ ಹತ್ತಿರ ಬಂದಿದ್ದರಿಂದ ಗಿಮಿಕ್ ಗಾಗಿ ಇಲ್ಲಿ ಬಂದಿದ್ದೀರಿ ಎಂದು ರೈತರು ಬಿ.ಎನ್ ಚಂದ್ರಪ್ಪನನ್ನು ಪ್ರಶ್ನಿಸಿದರು.

ನಿಮ್ಮ ರಾಜಕೀಯವನ್ನು ವಿಧಾನ ಸೌಧ, ಪಾರ್ಲಿಮೆಂಟ್ ನಲ್ಲಿ ಮಾತನಾಡಿ, ಇಲ್ಲಿ ಯಾಕೆ? ಬಂದಿದ್ದೀರಿ, ಹಿಂದೆ ಸಂಸದರಾಗಿದ್ದಾಗಲೂ ಇದೇ ರೀತಿ ಹೇಳಿ ರೈತರನ್ನು ಕಡೆಗಣಿಸಿದ್ದು ಎರಡು ಪಕ್ಷಗಳು ರೈತರಿಗೆ ಮೋಸ ಮಾಡುತ್ತಿರುವುದಾಗಿ ರೈತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ವೇಳೆಯಲ್ಲಿ ಮುಜುಗರಕ್ಕೆ ಒಳಗಾದ ಬಿ.ಎನ್ ಚಂದ್ರಪ್ಪ ಅವರು ನಗು ನಗುತ್ತಲೇ ಭಾಷಣ ಮುಕ್ತಾಯಗೊಳಿಸಿ ಸ್ಥಳದಿಂದ ತೆರಳಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment