ಚಿತ್ರದುರ್ಗ. ಮಾ.31: ಮಾ.28 ರಂದು ಸಂಜೆ ಸುಮಾರು 6.55 ಗಂಟೆಗೆ ಚಿತ್ರದುರ್ಗ ನಗರದ ಹೊರವಲಯದಲ್ಲಿ ಕಣಿವೆ ಮಾರಮ್ಮ ನಗರ ಮುಂಭಾಗದ ಕುರಿ ತಿಮ್ಮಪ್ಪ ಬಡಾವಣೆ ಮುಂದೆ ಚಿತ್ರದುರ್ಗದಿಂದ ಬೆಂಗಳೂರು ಕಡೆಗೆ ಹೋಗುವ ಹಳೇ ರಾಷ್ಟ್ರೀಯ ಹೆದ್ದಾರಿ ಎನ್ಹೆಚ್-48 ರಸ್ತೆಯನ್ನು ದಾಟುತಿದ್ದ ಸುಮಾರು 50-55 ವಯಸ್ಸಿನ ಅಪರಿಚಿತ ಮಹಿಳೆಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪರಿಚಿತ ಮಹಿಳೆ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಕುರಿತು ಪೊಲೀಸ್ ವೃತ್ತ ನಿರೀಕ್ಷಕರು, ಬಡಾವಣೆ ವೃತ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ಮಹಿಳೆ ಸುಮಾರು 5.2 ಅಡಿ ಎತ್ತರ, ಮೃತ ಶವದ ಮೈ ಮೇಲಿನ ಬಟ್ಟಗಳು ನೀಲಿ ಬಣ್ಣದ ತುಂಬು ತೋಳಿನ ಟೀ-ಷರ್ಟ್, ಕೆಂಪು ಬಣ್ಣದ ಲಂಗ, ಕೆಂಪು ಬಣ್ಣದ ಒಳಚಡ್ಡಿ ಧರಿಸಿರುತ್ತಾಳೆ. ಮೃತ ಅಪರಿಚಿತ ಮಹಿಳೆ ವಾರಸುದಾರರು ಪತ್ತೆಯಾದಲ್ಲಿ ಪೊಲೀಸ್ ವೃತ್ತ ನಿರೀಕ್ಷಕರ ದೂರವಾಣಿ ಸಂಖ್ಯೆ 9480803130, ಪೊಲೀಸ್ ಉಪನಿರೀಕ್ಷಕರ ದೂರವಾಣಿ ಸಂಖ್ಯೆ 9480803164, ಕಂಟ್ರೋಲ್ ರೂಂ, ದೂರವಾಣಿ ಸಂಖ್ಯೆ 08194-222781 ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.





















