ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 05 : ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪನವರಿಗೆ ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವಂತೆ ಚಿತ್ರದುರ್ಗದ ಕುರುಬ ಸಮಾಜದವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬುಧವಾರ ಮನವಿ ಸಲ್ಲಿಸಿದರು.

ಕಾಗಿನೆಲೆ ಕನಕ ಗುರುಪೀಠದ ಆಡಳಿತಾಧಿಕಾರಿಯಾಗಿರುವ ಶಾಸಕ ಬಿ.ಜಿ.ಗೋವಿಂದಪ್ಪನವರಿಗೆ ಸಚಿವ ಸ್ಥಾನ ಕೈತಪ್ಪಿರುವುದು ನಮ್ಮ ಸಮಾಜಕ್ಕೆ ಅತೀವ ನೋವುಂಟು ಮಾಡಿದೆ ಎಂದು ಬಿ.ಕೆ.ಹರಿಪ್ರಸಾದ್ರವರಲ್ಲಿ ಅವಲತ್ತುಕೊಂಡರು.

ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಕುರುಬರ ಸಂಘದ ಜಿಲ್ಲಾಧ್ಯಕ್ಷ ಶ್ರೀರಾಂ, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ಬಿ.ಟಿ.ಜಗದೀಶ್, ಮೃತ್ಯುಂಜಯ
ಪೊಲೀಸ್ ಬಾಬಣ್ಣ, ಶಶಿ ಹೊಳಲ್ಕೆರೆ, ಗಾಡಿ ಮಂಜುನಾಥ್ ಇವರುಗಳು ಈ ಸಂದರ್ಭದಲ್ಲಿದ್ದರು.
ಮನವಿ ಆಲಿಸಿದ ಬಿ.ಕೆ.ಹರಿಪ್ರಸಾದ್ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳು ಈಗಾಗಲೆ ಸಚಿವ ಸಂಪುಟ ವಿಸ್ತರಣೆಯಾಗಿದೆ. ಮುಂದಿನ ದಿನಗಳಲ್ಲಿ ಬಿ.ಜಿ.ಗೋವಿಂದಪ್ಪನವರಿಗೆ ಅವಕಾಶ ಮಾಡಿಕೊಡುವುದಾಗಿ ಭರವಸೆ ನೀಡಿದರು.










