Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಎಸ್. ಆರ್. ಎಸ್. ಶಿಕ್ಷಣ ಮಹಾವಿದ್ಯಾಲಯದಲ್ಲಿ ಕುವೆಂಪು ಜನ್ಮದಿನಾಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 31 : ದೇಶ ಕಂಡ ಅಪ್ರತಿಮ ಸಾಹಿತಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರ ಕನ್ನಡ ನಾಡು ನುಡಿಗೆ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಸೇವೆ ಅನನ್ಯ ಎಂದು ಪ್ರಾಂಶುಪಾಲ ಡಾ. ರವಿ ಟಿ ಎಸ್ ಹೇಳಿದರು.

ಅವರು ನಗರದ ಎಸ್ ಆರ್ ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಡಿಸೆಂಬರ್. 30 ರಂದು ನಡೆದ ರಾಷ್ಟ್ರಕವಿ ಕುವೆಂಪುರವರ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಂತರ ಉಪನ್ಯಾಸಕರಾದ ರವಿಕುಮಾರ್ ಮಾತನಾಡುತ್ತ ಕುವೆಂಪುರವರು ಕೇವಲ ಸಾಹಿತಿಗಳಷ್ಟೆ ಅಲ್ಲದೆ ಒಬ್ಬ ಸಮಾಜವಾದಿಯಾಗಿ ಶಿಕ್ಷಣ ತಜ್ಞನಾಗಿ ಹಾಗೂ ಆಧ್ಯಾತ್ಮಿಕ ವ್ಯಕ್ತಿಯಾಗಿಯು ಸಹ ಗುರುತಿಸಿಕೊಂಡಿದ್ದಾರೆ. ಎಂದು ತಿಳಿಸಿದರು.

ಪ್ರಶಿಕ್ಷಣಾರ್ಥಿಯಾದ ವೀರೇಶ ಇ ರವರು ಸಹ ಕುವೆಂಪುರವರ ಜೀವನ ಸಾಧನೆ ಕೃತಿಗಳು ನಾಟಕಗಳು ಹಾಗೂ ಪ್ರಶಸ್ತಿಗಳ ಬಗ್ಗೆ ತಿಳಿಸಿದರು. ಗಂಗಾಧರ ಡಿ ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಸ್ಮಿತಾ ಸಿ ಆರ್ ಪ್ರಾರ್ಥಿಸಿದರು. ಅಂಜಲಿ ಸ್ವಾಗತಿಸಿದರು. ದೀಪಾ ಇ ವಂದಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...