Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಕಳೆದ 24 ಗಂಟೆಗಳ ಮಳೆ ವರದಿ : ಡಿ.ಮರಿಕುಂಟೆಯಲ್ಲಿ ಹೆಚ್ಚು ಮಳೆ

Facebook
Twitter
Telegram
WhatsApp

ಚಿತ್ರದುರ್ಗ. ಮೇ.13: ಭಾನುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಡಿ.ಮರಿಕುಂಟೆಯಲ್ಲಿ 51.6 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಪ್ರಮಾಣದ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 29.6 ಮಿ.ಮೀ, ಪರಶುರಾಂಪುರ 31.8 ಮಿ.ಮೀ, ನಾಯಕನಹಟ್ಟಿ 8.2 ಮಿ.ಮೀ, ತಳಕು 27.2 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 13.2, ಚಿಕ್ಕಜಾಜೂರು 12.6 ಮಿ.ಮೀ, ಹೆಚ್.ಡಿ.ಪುರದಲ್ಲಿ 11.2 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮುರಿನಲ್ಲಿ 23 ಮಿ.ಮೀ, ರಾಯಾಪುರ 15.6 ಮಿ.ಮೀ, ಬಿ.ಜಿ.ಕೆರೆ 37 ಮಿ.ಮೀ, ರಾಂಪುರ 6 ಮಿ.ಮೀ, ದೇವಸಮುದ್ರದಲ್ಲಿ 2 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 6.4 ಮಿ.ಮೀ, ಬಾಗೂರು 17.2 ಮಿ.ಮೀ, ಮಾಡದಕೆರೆ 17.2 ಮಿ.ಮೀ, ಮತ್ತೋಡು 14.2 ಮಿ.ಮೀ, ಶ್ರೀರಾಂಪುರದಲ್ಲಿ 35 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 14.6 ಮಿ.ಮೀ, ಚಿತ್ರದುರ್ಗ-2ರಲ್ಲಿ 21 ಮಿ.ಮೀ, ಹಿರೇಗುಂಟನೂರು 1.2 ಮಿ.ಮೀ, ಭರಮಸಾಗರ 3.4 ಮಿ.ಮೀ, ಸಿರಿಗೆರೆ 9 ಮಿ.ಮೀ, ಐನಹಳ್ಳಿಯಲ್ಲಿ 11.2 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 31.2 ಮಿ.ಮೀ, ಇಕ್ಕನೂರು 15 ಮಿ.ಮೀ, ಈಶ್ವರಗೆರೆ 20.2 ಮಿ.ಮೀ, ಬಬ್ಬೂರು 11 ಮಿ.ಮೀ, ಸೂಗೂರು 31.2 ಮಿ.ಮೀ ಮಳೆಯಾಗಿದೆ.

10 ಮನೆಗಳು ಭಾಗಶಃ ಹಾನಿ : ಭಾನುವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 10 ಮನೆಗಳು ಭಾಗಶಃ ಹಾನಿಯಾಗಿದ್ದು, 2 ದೊಡ್ಡ ಜಾನುವಾರು, 3 ಸಣ್ಣ ಜಾನುವಾರು ಹಾಗೂ 6.11 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ಚಳ್ಳಕೆರೆ ತಾಲ್ಲೂಕಿನಲ್ಲಿ 2 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 8 ಮನೆ ಭಾಗಶಃ ಹಾನಿಯಾಗಿದ್ದು, 0.50 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಹೊಸದುರ್ಗ ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿದ್ದು, 2 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ಹಿರಿಯೂರು ತಾಲ್ಲೂಕಿನಲ್ಲಿ 2 ದೊಡ್ಡ ಜಾನುವಾರು ಹಾಗೂ 1 ಮನೆ ಭಾಗಶಃ ಹಾನಿ, 1.61 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನಲ್ಲಿ 2 ಸಣ್ಣ ಜಾನುವಾರು ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಮೂಲದ ಡಾ. ಕವಿತಾ ಬಿ.ಟಿ ಚಾಮರಾಜನಗರ ಜಿಲ್ಲೆಯ ನೂತನ ಎಸ್.ಪಿ. ಆಗಿ ನೇಮಕ

ಸುದ್ದಿಒನ್, ಚಿತ್ರದುರ್ಗ ಜು. 03 : ರಾಜ್ಯ ಸರ್ಕಾರ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇವರಲ್ಲಿ ಚಿತ್ರದುರ್ಗ ತಾಲ್ಲೂಕು ಬೊಮ್ಮೆನಹಳ್ಲಿ ಮೂಲದ  ಡಾ ಕವಿತಾ ಬಿ.ಟಿ. ಅವರನ್ನು ಚಾಮರಾಜನಗರ ಜಿಲ್ಲೆಯ ನೂತನ ಎಸ್.

ಮನೆ ಮನಸ್ಸುಗಳಲ್ಲಿ ವಚನಗಳನ್ನು ಅನುಸಂಧಾನ ಮಾಡಿಕೊಂಡರೆ ಜಗತ್ತನ್ನೇ ಅರಿತಂತೆ : ಡಾ. ಜೆ. ಕರಿಯಪ್ಪ ಮಾಳಿಗೆ

ಸುದ್ದಿಒನ್, ಚಿತ್ರದುರ್ಗ, ಜುಲೈ.03 :  ಭಾರತದ ಮೊದಲ ಮಹಿಳಾ ವಿಮೋಚನಾ ಚಳುವಳಿ ಹಾಗೂ ಗಟ್ಟಿಯಾಗಿ ಮಾತನಾಡುವ ಶಕ್ತಿ ನೀಡಿದ್ದು ವಚನ ಸಾಹಿತ್ಯ. ಮನೆ ಮನಸ್ಸುಗಳಲ್ಲಿ ವಚನಗಳನ್ನು ಅನುಸಂಧಾನ ಮಾಡಿಕೊಂಡರೆ ಜಗತ್ತನ್ನೇ ಅರಿತಂತೆ ಎಂದು ಸರ್ಕಾರಿ

ಗ್ಯಾರಂಟಿ ಯೋಜನೆಗಳನ್ನು ಶೇ.100ರಷ್ಟು ಅನುಷ್ಠಾನ ಮಾಡಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ. ಜುಲೈ.03:  ಜಿಲ್ಲೆಯಲ್ಲಿ ದುರಸ್ಥಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೆ ಸರಿಪಡಿಸಿ, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ

error: Content is protected !!