Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ರೂ.2.05 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

---Advertisement---

ಚಿತ್ರದುರ್ಗ. ಡಿ.06: ಚಿತ್ರದುರ್ಗ ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್‍ಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಗೂ ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ಅವರು ಭೂಮಿಪೂಜೆ ನೆರವೇರಿಸಿದರು.

ಮುಖ್ಯಮಂತ್ರಿಗಳ ವಿಶೇಷ ಅನುದಾನ ರೂ.7.50 ಕೋಟಿ ಚಿತ್ರದುರ್ಗ ನಗರಕ್ಕೆ ಮಂಜೂರಾಗಿದ್ದು, ಶುಕ್ರವಾರ ರೂ.2.05 ಕೋಟಿ ವೆಚ್ಚದ ಸಿ.ಸಿ.ರಸ್ತೆ, ಸಿ.ಸಿ.ಚರಂಡಿ, ಡೆಕ್ ಸ್ಲಾಬ್, ಒಳಚರಂಡಿ, ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ನಗರದ ವಾರ್ಡ್ ನಂ.32ರ ಐಯುಡಿಪಿ ಲೇಔಟ್‍ನ 4ನೇ ಕ್ರಾಸ್ ರಾಜ್ ಕುಮಾರ್ ಪಾರ್ಕ್ ಹತ್ತಿರ ರೂ.30 ಲಕ್ಷ ವೆಚ್ಚದಲ್ಲಿ ಆರ್.ಸಿ.ಸಿ.ಡೆಕ್ ಸ್ಲಾಬ್ ಹಾಗೂ ಸಿ.ಸಿ. ಚರಂಡಿ ನಿರ್ಮಾಣ ಕಾಮಗಾರಿ, ವಾರ್ಡ್ ನಂ.33ರ ಬುದ್ಧನಗರದ 4, 5ನೇ ಕ್ರಾಸ್‍ಗಳಲ್ಲಿ ರೂ.30 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂ.1ರ ಮೈಲಮ್ಮ ದೇವಸ್ಥಾನದ ಮಾಜಿ ನಗರಸಭೆ ಸದಸ್ಯರಾದ ರಂಗಪ್ಪ ಮನೆಯವರೆಗೆ ಹಾಗೂ ಮೈಲಮ್ಮ ದೇವಸ್ಥಾನದಿಂದ ಅಂಜುಮಾನ್‍ವರೆಗೆ ಹಾಗೂ ಜೋಗಿಮಟ್ಟಿ 6ನೇ ಕ್ರಾಸ್ ಸುಣ್ಣದ ಗುಮ್ಮಿ ಹತ್ತಿರ ರತ್ನಮ್ಮ ಮನೆಯಿಂದ ಕಾಡಪ್ಪ ಮನೆಯವರೆಗೆ ರೂ.30 ಲಕ್ಷದಲ್ಲಿ ಸಿ.ಸಿ.ಚರಂಡಿ, ಡೆಕ್ ಸ್ಲಾಬ್ ಹಾಗೂ ಒಳಚರಂಡಿ ಕಾಮಗಾರಿ, ವಾರ್ಡ್ ನಂ.4ರ ಫಿಲ್ಟರ್ ಹೌಸ್ ಹತ್ತಿರ ಕಂಠಿ ರಶೀದ್ ಮನೆ ಹತ್ತಿರ, ಎನ್.ಡಿ.ಕುಮಾರ್ ಮನೆ ಹತ್ತಿರ, ಕಂಬಳಗೇರಿ ಬೀದಿ ಹತ್ತಿರ, ಬ್ರಹ್ಮಗಿರಿ ಪ್ರೆಸ್ ಹತ್ತಿರ ರೂ.30 ಲಕ್ಷ ವೆಚ್ಚದಲ್ಲಿ ಸಿ.ಸಿ.ಚರಂಡಿ ನಿರ್ಮಾಣ ಕಾಮಗಾರಿ ಹಾಗೂ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿ, ವಾರ್ಡ್ ನಂ.2ರ ಅಕ್ಕಚ್ಚಮ್ಮ ಬಾವಿ ಅಂಜುಮಾನ್ ಮುಂಭಾಗದಲ್ಲಿ ಮತ್ತು ಇಸ್ತ್ರಿ ನಾಗಣ್ಣ ಮನೆ ಮುಂಭಾಗ, ಬ್ಯಾಂಕ್ ರುದ್ರಣ್ಣ ಮುಂಭಾಗದಲ್ಲಿ ರೂ.10 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ, ಚರಂಡಿ, ಒಳಚರಂಡಿ, ಆರ್.ಸಿ.ಸಿ ಸ್ಲಾಬ್ ಹಾಗೂ ಡೆಕ್ ಸ್ಲಾಬ್ ನಿರ್ಮಾಣ ಕಾಮಗಾರಿ, ವಾರ್ಡ್‍ನಂ 3ರ ಕಾಮನಭಾವಿ ಬಡಾವಣೆಯ 1ನೇ ಮುಖ್ಯರಸ್ತೆ ಎಡಭಾಗದಲ್ಲಿ 1ನೇ ಅಡ್ಡರಸ್ತೆ ಗಲ್ಲಿಯಲ್ಲಿ ನಗರಸಭೆ ಸದಸ್ಯರಾದ ಶ್ರೀನಿವಾಸ್ ಅವರ ಮನೆ ಹಿಂಭಾಗ ಕೂಬಾ ನಾಯ್ಕ್ ಮನೆ ಮುಂಭಾಗ ರೂ.30 ಲಕ್ಷ ವೆಚ್ಚದಲ್ಲಿ ಅಂಜುಮಾನ್ ರಸ್ತೆ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವ ಕಾಮಗಾರಿ, ವಾರ್ಡ್ ನಂ 7ರಲ್ಲಿ ಬುರುಜನಹಟ್ಟಿ ಮಲ್ನಾಡ್ ಚೌಡಮ್ಮ ದೇವಸ್ಥಾನದ ಹತ್ತಿರ ಹಾಗೂ ಮೇಕೆ ಬಂಡೆ ಹತ್ತಿರ ಗಣಚಾರಿ ಶಾಂತಮ್ಮ ಮನೆ ಹತ್ತಿರ ರೂ.20 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ ಹಾಗೂ ಡೆಕ್ ಸ್ಲಾಬ್ ನಿರ್ಮಾಣ ಕಾಮಗಾರಿ, ವಾರ್ಡ್ ನಂ.8ರ ಸಿಹಿನೀರು ಹೊಂಡದ ರಸ್ತೆಯ ಬರಗೇರಮ್ಮ ಶಾಲೆ ಮುಂಭಾಗದಿಂದ ಸಿಹಿನೀರು ಹೊಂಡದ ಹಳ್ಳದವರೆಗೆ ರೂ.25 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ, ಡೆಕ್ ಸ್ಲಾಬ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

*ಡಸ್ಟ್ ಬಿನ್ ವಿತರಣೆ:* ನಗರದ ವಾರ್ಡ್ ನಂ.33ರ ಪ್ರಶಾಂತ ನಗರದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಹಸಿ ಕಸ ಒಣ ಕಸ ವಿಂಗಡಿಸಿ ನೀಡಲು 10 ಜನರಿಗೆ ಸಾಂಕೇತಿಕವಾಗಿ ಡಸ್ಟ್ ಬಿನ್ ವಿತರಿಸಿದರು. ರೂ.20 ಲಕ್ಷ ವೆಚ್ಚದಲ್ಲಿ 10,900 ಡಸ್ಟ್ ಬಿನ್ ಖರೀದಿಸಲಾಗಿದೆ.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ, ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ನಗರಸಭೆ ಸದಸ್ಯರಾದ ನಾಗಮ್ಮ, ಪೂಜಾ ಯೋಗಿ, ಗೀತಾ, ಚಂದ್ರಶೇಖರ್, ಮೀನಾಕ್ಷಿ, ಶಶಿಧರ್, ತಾರಕೇಶ್ವರಿ, ಗೊಪ್ಪೆ ಮಂಜುನಾಥ್ ಹಾಗೂ ನಗರಸಭೆ ನಾಮನಿರ್ದೇಶನ ಸದಸ್ಯರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

​ಸರ್ಕಾರಿ ಬ್ಯಾಂಕ್ ಖಾತೆಗಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಬ್ಯಾಂಕ್ ದಾಖಲೆಗಳಲ್ಲಿ ಕಡ್ಡಾಯವಾಗಿ ‘ಸರ್ಕಾರಿ ಇ-ಮೇಲ್ ಐಡಿ’ ಬಳಸಲು ಆದೇಶ

ಡೇಟಾ ಸೆಂಟರ್ ಕ್ರಾಂತಿ: 2030ರ ವೇಳೆಗೆ ಭಾರತದಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯತೆ!

ಬೆಂಗಳೂರಿನ ಫುಟ್‌ಬಾಲ್ ಪ್ರಿಯರಿಗೆ ಗುಡ್ ನ್ಯೂಸ್: ಫಿಫಾ ವಿಶ್ವಕಪ್ ಹಿನ್ನೆಲೆ ಮಧ್ಯರಾತ್ರಿ 3.30ರವರೆಗೆ ಹೋಟೆಲ್, ರೆಸ್ಟೋರೆಂಟ್‌ ತೆರೆಯಲು ಅನುಮತಿ!

ಜುಲೈ 16 ರಂದು ರಂಗಕರ್ಮಿ ಕೆ.ವಿ ಸುಬ್ಬಣ್ಣ ಸ್ಮರಣೋತ್ಸವ : ಕನ್ನಡ ಗೀತಗಾಯನ ತರಬೇತಿ ಕಾರ್ಯಾಗಾರ

ಚಿತ್ರದುರ್ಗ ಅಭಿವೃದ್ಧಿಗೆ ವೇಗ ನೀಡಲು ಶಾಸಕ ವೀರೇಂದ್ರ ಪಪ್ಪಿ ಒತ್ತಾಯ; ಈ ನಾಲ್ಕು ಪ್ರಮುಖ ಯೋಜನೆಗಳಿಗೆ ಅನುದಾನ ಬೇಡಿಕೆ

ಆಷಾಢ ಅಮಾವಾಸ್ಯೆ: ಕೋಟೆ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಭಕ್ತರ ಸಾಗರ

Leave a Comment