Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಗೊಡಬನಹಾಳ್‌ ನಲ್ಲಿ ಕೊನೆಗೂ ಬೋನಿಗಿದ್ದ ಚಿರತೆ ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

---Advertisement---

ಚಿತ್ರದುರ್ಗ.ಜೂನ್.29: ಕಳೆದ ಕೆಲವು ದಿನಗಳಿಂದ ಗೊಡಬನಹಾಳ್ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಜನ ನಿದ್ದೆಗೆಡುವಂತೆ ಮಾಡಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಪಂಜರ ಸೇರಿದೆ. ಜಮೀನೊಂದರಲ್ಲಿ ಅಡಗಿ ಕುಳಿತಿದ್ದ ಈ ಚಿರತೆಯನ್ನು ಅರಣ್ಯ ಸಿಬ್ಬಂದಿ ಯಶಸ್ವಿಯಾಗಿ ಸೆರೆಹಿಡಿಯುವ ಮೂಲಕ ಸ್ಥಳೀಯರ ಆತಂಕಕ್ಕೆ ತೆರೆ ಎಳೆದಿದ್ದಾರೆ.

ಗ್ರಾಮದ ಪ್ರಮುಖ ಭಾಗಗಳಲ್ಲಿ  ಓಡಾಡಿಕೊಂಡಿದ್ದ ಈ ಚಿರತೆ, ಸಿಕ್ಕಸಿಕ್ಕಲ್ಲಿ ಕುರಿ ಮತ್ತು ಮೇಕೆಗಳ ಮೇಲೆ ದಾಳಿ ನಡೆಸಿ ಹೊತ್ತೊಯ್ಯುತ್ತಿತ್ತು. ಇದರಿಂದ ಆಕ್ರೋಶಗೊಂಡಿದ್ದ ರೈತರು ಮತ್ತು ಗ್ರಾಮಸ್ಥರು, ಚಿರತೆ ಹಿಡಿಯುವಂತೆ ಅರಣ್ಯ ಇಲಾಖೆಗೆ ತೀವ್ರ ಒತ್ತಾಯ ಹೇರಿದ್ದರು. ನಿರಂತರ ದಾಳಿಗಳಿಂದಾಗಿ ಇಲಾಖೆಯ ಅಧಿಕಾರಿಗಳಿಗೂ ಇದೊಂದು ದೊಡ್ಡ ಸವಾಲಾಗಿ ಪರಿಣಮಿಸಿತ್ತು.

ಕೊನೆಗೆ ಅರಣ್ಯಾಧಿಕಾರಿ ಗೋಪ್ಯಾನಾಯ್ಕ ಅವರ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡ ಅರಣ್ಯ ಸಿಬ್ಬಂದಿ, ಚಿರತೆ ಅಡಗಿದ್ದ ಜಾಗವನ್ನು ಗುರುತಿಸಿ ನಿಖರವಾಗಿ ಅರವಳಿಕೆ ಮದ್ದು  ನೀಡುವಲ್ಲಿ ಯಶಸ್ವಿಯಾದರು. ಚಿರತೆ ಪ್ರಜ್ಞೆ ತಪ್ಪುತ್ತಿದ್ದಂತೆ ಅದನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಯಿತು. ಈ ರೋಮಾಂಚನಕಾರಿ ಕಾರ್ಯಾಚರಣೆಯನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಸದ್ಯ ಸೆರೆಸಿಕ್ಕ ಚಿರತೆಯನ್ನು ಚಿತ್ರದುರ್ಗದ ಪ್ರಸಿದ್ಧ ಆಡುಮಲ್ಲೇಶ್ವರ ಮೃಗಾಲಯಕ್ಕೆ ಸ್ಥಳಾಂತರಿಸಲಾಗಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ