Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ : ಕೋಟೆಯಲ್ಲಿ ಚಿರತೆ ಪ್ರತ್ಯಕ್ಷ : ಪ್ರವಾಸಿಗರಲ್ಲಿ ಆತಂಕ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 03 : ಇತ್ತೀಚಿನ ದಿನಗಳಲ್ಲಿ ಚಿರತೆಗಳು ಸೇರಿದಂತೆ ಕಾಡು ಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಬರುವುದು ಸಾಮಾನ್ಯವಾಗಿದೆ. ಕೆಲವೊಂದು ಕಡೆ ದಾಳಿಗಳನ್ನು ನಡೆಸಿವೆ. ಚಿರತೆ ಕಂಡರೆ ಜನ ಭಯಭೀತಿಗೊಳ್ಳುತ್ತಾರೆ. ಈಗ ಏಳು ಸುತ್ತಿನ ಕಲ್ಲಿನ ಕೋಟೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಪ್ರವಾಸಿಗರಲ್ಲಿ ಆತಂಕ ಸೃಷ್ಟಿಸಿದೆ. ಇಂದು ಸಂಜೆ ವೇಳೆಗೆ ಚಿರತೆಯ ಹೆಜ್ಜೆ ಗುರುತನ್ನು ಕಂಡು ಜನ ಬೆಚ್ಚಿಬಿದ್ದಿದ್ದಾರೆ. ಸಂಜೆ 5.45 ರ ಸುಮಾರಿಗೆ ಕೋಟೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.

ಪ್ರವಾಸಿಗರಿಗೆ ಕೋಟೆನಾಡಿನ ಬಗ್ಗೆ ಮಾಹಿತಿಯನ್ನು ತಿಳಿಸುತ್ತಿದ್ದಾಗ ಚಿರತೆ ಪ್ರತ್ಯಕ್ಷವಾಗಿದೆ. ಕೋಟೆ ಮಾರ್ಗದರ್ಶಿ ಮೊಹಿದ್ದೀನ್ ಖಾನ್ ಬಸವರಾಜ್, ಪರಶುರಾಮ್ ಮತ್ತು ಪ್ರವಾಸಿಗರ ಕಣ್ಣಿಗೆ ಚಿರತೆ ಕಾಣಿಸಿಕೊಂಡಿದೆ. 5.50 ಕ್ಕೆ ಗಂಗಾವತಿಯ ಪ್ರವಾಸಿಗರು ಕೋಟೆ ನೋಡಲು ಬಂದಿದ್ದರು. ಸುಮಾರು 50 ಜನರ ತಂಡ ಬಂದಿತ್ತು. ಅವರೆಲ್ಲರು ಟಿಕೆಟ್ ಪಡೆದು ಕೋಟೆ ನೋಡಲು ಮೇಲೆ ಹತ್ತುತ್ತಿದ್ದರು. ಆಗ ಕೋಟೆಯ 6ನೇ ಸುತ್ತಿನ ಬಾಗಿಲ ಬಳಿ ಈ ಚಿರತೆ ಕಾಣಿಸಿಕೊಂಡಿದೆ. ಅದು ಯಾರ ಭಯವೂ ಇಲ್ಲದೆ, ಹೊಸದಾಗಿ ನಿರ್ಮಾಣವಾಗಿರುವ ಟಾಯ್ಲೆಟ್ ಮೇಲಿನ ಹೆಬ್ಬoಡೆ ಮೇಲೆ ಕೂತಿತ್ತು. ಅಷ್ಟೇ ಅಲ್ಲ ಕೋಟೆ ನೋಡಲು ಬಂದಿದ್ದ ಜನರನ್ನೇ ದಿಟ್ಟಿಸಿ ನೋಡುತ್ತಿತ್ತು. ಅದನ್ನು ಕಂಡ ಪ್ರವಾಸಿಗರು ಗಾಬರಿಯಾಗಿದ್ದಾರೆ. ಬಳಿಕ ಕೋಟೆ ಮೇಲಿಂದ ಓಡಿ ಬಂದ ಜನ ಉಳಿದವರಿಗೂ ಚಿರತೆಯನ್ನು ತೋರಿಸಿದರು. ಜನರನ್ನು ಕಂಡರು ಹೆದರದ ಚಿರತೆ ಸುಮಾರು 1/2 ಘಂಟೆಗಳ ಕಾಲ ಅಲ್ಲೇಯೇ ಕೂತಿತ್ತು. ಬಳಿಕ ಆ ಸ್ಥಳದಿಂದ ಓಡಿ ಹೋಯ್ತು ಎಂದು ಹಿರಿಯ ಪ್ರವಾಸಿ ಮಾರ್ಗದರ್ಶಿ ಬಿ. ಮೊಹಿದ್ದೀನ್ ಖಾನ್ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment