Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಲಿಂಗಾರೆಡ್ಡಿ ಯವರಿಗೆ ಮಾತೃ ವಿಯೋಗ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 16 : ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್‌ಆರ್‌ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ ಅವರ ತಾಯಿ ಕೃಷ್ಣಮ್ಮ ಬಿ.ಅನಂತರೆಡ್ಡಿ  (90 ವರ್ಷ) ಬುಧವಾರ ನಿಧನ ಹೊಂದಿದರು.

ಮೃತರು ಪುತ್ರ ಬಿ.ಎ. ಲಿಂಗಾರೆಡ್ಡಿ, ನಾಲ್ವರು ಪುತ್ರಿಯರು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ತುರುವನೂರು ರಸ್ತೆಯಲ್ಲಿರುವ ನಿವಾಸದದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಶುಕ್ರವಾರ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ  3 ಗಂಟೆಗೆ ದೊಡ್ಡಸಿದ್ದವ್ವನಹಳ್ಳಿ ಸಮೀಪದ ಕ್ಯಾದಿಗೆರೆ ಫಾರಂ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರ ಕಣ್ಣುಗಳನ್ನು ಚಿತ್ರದುರ್ಗ ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್‌ಗೆ ನೇತ್ರದಾನ ಮಾಡಿದ್ದು, ದುಃಖದಲ್ಲೂ ಕಣ್ಣುಗಳನ್ನು ದಾನ ಮಾಡಿದ ಕುಟುಂಬದ ಸದಸ್ಯರ ಕಾರ್ಯಕ್ಕೆ ವೈದ್ಯರು ಪ್ರಶಂಸೆ ವ್ಯಕ್ತಪಡಿಸಿ ಪ್ರಮಾಣ ಪತ್ರ ವಿತರಿಸಿದರು.

ಸಂತಾಪ : ಕೃಷ್ಣಮ್ಮ ಅವರ ನಿಧನಕ್ಕೆ ಶಾಸಕ ವೀರೇಂದ್ರ ಪಪ್ಪಿ ಸೇರಿದಂತೆ ಹಲವು ಪಕ್ಷಗಳ ರಾಜಕೀಯ ಮುಖಂಡರು, ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು, ಖಾಸಗಿ ಬಸ್ ಮಾಲೀಕರ ಸಂಘದ ಸದಸ್ಯರು,  ಎಸ್‌ಆರ್‌ಇ ಟ್ರಾವೆಲ್, ಎಸ್‌ಆರ್‌ಇ ಲಾಜಿಸ್ಟಿಕ್ಸ್,    ಎಸ್‌ಆರ್‌ಎಸ್ ಸಮೂಹ ಶಿಕ್ಷಣ ಸಂಸ್ಥೆಯ, ಪ್ರಾಂಶುಪಾಲರುಗಳು, ಉಪನ್ಯಾಸಕರು, ಶಿಕ್ಷಕರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...