Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು : ಫಲಿತಾಂಶ ಘೋಷಣೆಯಲ್ಲಿ ದೇಶದಲ್ಲಿಯೇ ಮೊದಲು…!

---Advertisement---

ಸುದ್ದಿಒನ್,  ಚಿತ್ರದುರ್ಗ. ಜೂನ್.04:  ಚಿತ್ರದುರ್ಗ (ಪರಿಶಿಷ್ಟ ಜಾತಿ) ಲೋಕಸಭಾ ಕ್ಷೇತ್ರ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಭಾರತೀಯ ಜನತಾ ಪಾರ್ಟಿಯ ಗೋವಿಂದ ಮಕ್ತಪ್ಪ ಕಾರಜೋಳ ಅವರು 6,84,890 ಮತಗಳನ್ನು ಪಡೆಯುವುದರೊಂದಿಗೆ ಜಯಭೇರಿ ಬಾರಿಸಿದ್ದಾರೆ.

ಬಿಜೆಪಿಯ ಗೋವಿಂದ ಮಕ್ತಪ್ಪ ಕಾರಜೋಳ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಿ.ಎನ್. ಚಂದ್ರಪ್ಪ ಎದುರು 48,121 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಿ.ಎನ್. ಚಂದ್ರಪ್ಪ 6,36,769 ಮತಗಳನ್ನು ಗಳಿಸಿದ್ದಾರೆ. ಬಹುಜನ ಸಮಾಜ ಪಾರ್ಟಿಯ ಅಶೋಕ ಚಕ್ರವರ್ತಿ 7705, ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ನರಸಿಂಹರಾಜು 4950, ಉತ್ತಮ ಪ್ರಜಾಕೀಯ ಪಾರ್ಟಿಯ ರಮೇಶ್ ನಾಯ್ಕ್ ಟಿ 2206, ಇಂಡಿಯನ್ ಮೂವ್‍ಮೆಂಟ್ ಪಾರ್ಟಿಯ ಬಿ.ಟಿ.ರಾಮಸುಬ್ಬಯ್ಯ 720, ಕರುನಾಡ ಸೇವಕರ ಪಾರ್ಟಿಯ ಶಬರೀಶ್ 1018, ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಸುಜಾತ ಡಿ 1014, ಪಕ್ಷೇತರ ಅಭ್ಯರ್ಥಿಗಳಾದ ಅಮೃತ್ ರಾಜ 834, ಗಣೇಶ 1093, ತುಳಸಿ ಹೆಚ್ 1082, ಡಾ.ಎಂ.ಪಿ.ದಾರಕೇಶ್ವರಯ್ಯ 1397, ನಾಗರಾಜಪ್ಪ 1679, ಭೂತರಾಜ್ ವಿ.ಎಸ್ 2397, ಮಂಜುನಾಥ ಸ್ವಾಮಿ ಟಿ 2676, ರಘುಕುಮಾರ್ ಎಸ್ 2337, ಬಿ.ವೆಂಕಟೇಶ ಶಿಲ್ಪಿ 4201, ಶ್ರೀನಿವಾಸಪುರದ ಶ್ರೀನಿವಾಸಬಾಬು ಪಾವಗಡ 4548, ಸುಧಾಕರ್ ಆರ್ 1211 ಮತ ಗಳಿಸಿದ್ದಾರೆ. ನೋಟಾಗೆ 3190 ಮತಗಳು ದಾಖಲಾಗಿವೆ. ಅಂಚೆ ಮತಗಳ ಪೈಕಿ 132 ತಿರಸ್ಕøತಗೊಂಡಿದ್ದು, 204 ಮತಗಳು ಅಮಾನ್ಯಗೊಂಡಿವೆ.

ಚುನಾವಣೆ ಫಲಿತಾಂಶ ಘೋಷಣೆಯಲ್ಲಿ ದೇಶದಲ್ಲಿಯೇ ಚಿತ್ರದುರ್ಗ ಮೊದಲು:

ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಇದರ ಫಲವಾಗಿ ದೇಶದಲ್ಲಿಯೇ ಪ್ರಥಮವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿಯನ್ನು ENCORE ತಂತ್ರಾಂಶದಲ್ಲಿ ಅಧೀಕೃತವಾಗಿ ಘೋಷಣೆ ಮಾಡಲಾಗಿದೆ.
ಮತ ಎಣಿಕೆ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು, ತಹಶೀಲ್ದಾರ್‍ಗಳು, ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು, ಸಿಬ್ಬಂದಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಭಿನಂದನೆ ಸಲ್ಲಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...