Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ ಲೋಕಸಭಾ ಕ್ಷೇತ್ರ | ಕಾಂಗ್ರೆಸ್ ಅಭ್ಯರ್ಥಿ ಬಿ. ಎನ್. ಚಂದ್ರಪ್ಪರನ್ನು ಗೆಲ್ಲಿಸಲು ಕಾರ್ಯಕರ್ತರು ಪಣತೊಡಬೇಕು : ಸಚಿವ ಡಿ ಸುಧಾಕರ್

---Advertisement---

ಸುದ್ದಿಒನ್, ಹಿರಿಯೂರು, ಮಾರ್ಚ್. 24 : ಸುಳ್ಳು ಹೇಳಿ, ಜನರನ್ನು ಭಾವನಾತ್ಮಕವಾಗಿ ಮರಳು ಮಾಡಿ ಹುಸಿ ದೇಶಪ್ರೇಮ ಹೆಸರಲ್ಲಿ ಅಧಿಕಾರ ಪಡೆಯುವುದು ಬಿಜೆಪಿ ಅವರ ನೀತಿ. ಆದರೆ  ಕಾಂಗ್ರೆಸ್ ಪಕ್ಷ  ಜನಪರ ವಾಗಿ ಯೋಚಿಸುವ, ಜನಪರ ಕಾರ್ಯಕ್ರಮ ನೀಡುವ, ಜನರ ಬದುಕನ್ನು ಸುಧಾರಣೆ ಮಾಡುವುದು ಮತ್ತು ಜನಪರ ಕಾರ್ಯಕ್ರಮ ಅನುಷ್ಠಾನ ಮಾಡುವುದು ನಮ್ಮ ಅಧ್ಯತೆಯ ಗುರಿಯಾಗಿದೆ  ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ತಿಳಿಸಿದರು.

ಭಾನುವಾರ ಹಿರಿಯೂರಿನ ರೋಟರಿ ಭವನದಲ್ಲಿ  ಲೋಕಸಭಾ ಚುನಾವಣೆಯಲ್ಲಿ ಮತಗಟ್ಟೆಗಳಿಗೆ ಪಕ್ಷದ ವತಿಯಿಂದ ನೇಮಕವಾಗಿರುವ ಬೂತ್ ಏಜೆಂಟರಿಗೆ ಏರ್ಪಡಿಸಿದ್ದ ಮಾಹಿತಿ ಮತ್ತು ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು

ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ನೀಡಿ ನುಡಿದಂತೆ ನಡೆದಿದ್ದೇವೆ ಮತ್ತು ನಡೆಯುತ್ತೇವೆ ಅನ್ನೋದು ನಮ್ಮ ಪಕ್ಷದ ಕಾರ್ಯತಂತ್ರ ನೀತಿಯಾಗಿದೆ.

ಕೇಂದ್ರ ಸರ್ಕಾರದ ಹುಸಿ ಸುಳ್ಳುಗಳನ್ನು ಜನರಿಗೆ ಪಕ್ಷದ ಕಾರ್ಯಕರ್ತರು  ಮನವರಿಕೆ ಮಾಡಬೇಕು ಜಿಲ್ಲೆಯಲ್ಲಿ ಕಳೆದ ಐದು ವರ್ಷದಲ್ಲಿ ಸಂಸದರ ಸಾಧನೆ ಶೂನ್ಯ
ಅಪ್ಪರ್ ಭದ್ರಾ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿದ್ದ ಐದು ಸಾವಿರದ ಮುನ್ನೂರು ಕೋಟಿಯಲ್ಲಿ ಬಿಡಿಗಾಸು ನೀಡಲಿಲ್ಲ. ಕೇಂದ್ರದ ಬಿಜೆಪಿ ಸರ್ಕಾರ ಬಂಡವಾಳ ಶಾಹಿಗಳನ್ನು ಪೋಷಿಸಿಕೊಂಡು ಸಣ್ಣ ಸಣ್ಣ ಉದ್ದಿಮೆದಾರರನ್ನು  ಸಂಕಷ್ಟಕ್ಕೆ ದೂಡಿದೆ.
ಸಾಕಷ್ಟು ಸರ್ಕಾರಿ ಸೌಮ್ಯದ ಕಂಪನಿಗಳನ್ನು
ಮಾರಾಟಮಾಡಲಾಗಿದೆ ಯುವಜನರಿಗೆ ಹುಸಿ ಬರವಸೆ ನೀಡಿ ಮತ ಪಡೆಯುವ ಸರಕನ್ನಾಗಿ ಮಾಡಿ ಬಿಜೆಪಿ ಯುವಕರನ್ನು ಅಗೌರವಿಸಿದೆ.
ರೈತರ ಮೇಲೆ ನಿರಂತರವಾದ ದಬ್ಬಾಳಿಕೆಯನ್ನು ಮಾಡಿದೆ ಜನವಿರೋಧಿ ಕೇಂದ್ರ ಸರ್ಕಾರದ ನೀತಿಗಳನ್ನು ಮನೆ ಮನೆಗಳಿಗೆ ತಲುಪಿಸಬೇಕು ಅ ಮೂಲಕ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ರನ್ನು ಗೆಲ್ಲಿಸಲು ಕಾರ್ಯಕರ್ತರು ಪಣತೊಡಬೇಕು ಎಂದರು

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಮಾತನಾಡಿ
ಪಕ್ಷ ನನ್ನ ಸೇವೆ ಮತ್ತು ಪಕ್ಷ ನಿಷ್ಠೆಯನ್ನು ಗುರುತಿಸಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ
ನನಗೆ ಕಾರ್ಯಕರ್ತರೆ ಜೀವಾಳ ಕಾರ್ಯಕರ್ತರು ತಮ್ಮ ಬೂತ್ ವ್ಯಾಪ್ತಿಯಲ್ಲಿ ಅದಷ್ಟು ಹೆಚ್ಚಿನ ಪ್ರಮಾಣದಲ್ಲಿ ಶ್ರಮವಹಿಸಿ ನನ್ನ ಗೆಲುವಿಗೆ ಶ್ರಮಿಸಬೇಕು ಎಂದರು.

ಚಳ್ಳಕೆರೆ ಶಾಸಕ ರಘುಮೂರ್ತಿ ಮಾತನಾಡಿ
ಚಿತ್ರದುರ್ಗ ಕಾಂಗ್ರೆಸ್ ಪಕ್ಷದ ಭದ್ರಕೋಟೆ ಕಳೆದ ಚುನಾವಣೆಯಲ್ಲಿ ಅದ ಪ್ರಮಾದಗಳನ್ನು  ಮಾಡದೆ ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು ಎಂದು ಹೇಳಿದರು

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment